ಸ್ನಾನಕ್ಕೆ ನದಿಗೆ ಹೋದ ವ್ಯಕ್ತಿಯ ಮೇಲೆ ಮೊಸಳೆ ದಾಳಿ: ಗಂಭೀರ ಗಾಯ
Crocodile attacks man who went to bathe in river, seriously injured
ಸ್ನಾನಕ್ಕೆ ನದಿಗೆ ಹೋದ ವ್ಯಕ್ತಿಯ ಮೇಲೆ ಮೊಸಳೆ ದಾಳಿ: ಗಂಭೀರ ಗಾಯ
ಜಮಖಂಡಿ 29: ತಾಲೂಕಿನ ಕಡಕೋಳ ಗ್ರಾಮದಲ್ಲಿ ಮೊಸಳೆಯೊಂದು ನದಿ ಸ್ನಾನಕ್ಕೆಂದು ಹೋದ ವ್ಯಕ್ತಿಯ ಮೇಲೆ ದಾಳಿ ಮಾಡಿದ್ದು. ವ್ಯಕ್ತಿಯ ಕಾಲಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ.
ಕಡಕೋಳ ಗ್ರಾಮದ ನಿವಾಸಿ ಲಕ್ಷ್ಮಣ ದುರ್ಗಪ್ಪ ಮಾದರ (51) ಗಾಯಗೊಂಡ ವ್ಯಕ್ತಿ. ಎಂದಿನಂತೆ ಲಕ್ಷ್ಮಣ ಸ್ನಾನಕ್ಕೆಂದು ನದಿಗೆ ತೆರಳಿದ್ದಾರೆ ಎನ್ನಲಾಗಿದೆ. ನದಿಯಲ್ಲಿ ಇಳಿಯುತ್ತಲೇ ಮೊಸಳೆ ಬಂದು ಕಾಲು ಹಿಡಿದಿದೆ. ಜೋರಾಗಿ ಕಿರುಚಾಡಿ ಮೊಸಳೆಯ ಹಿಡಿತದಿಂದ ತಪ್ಪಿಸಿಕೊಂಡು ಪಾರಾಗಿ ದಡ ಸೇರಿದ್ದಾರೆ. ಮೊಸಳೆ ಬಲಗಾಲಿಗೆ ಜೋರಾಗಿ ಕಚ್ಚಿದ್ದು ಸಾಕಷ್ಟು ರಕ್ತಸ್ರಾವವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕೂಡಲೇ ಸ್ಥಳಿಯರು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಪರಿಣಾಮ ಸುಮಾರು 2 ಲಕ್ಷ ಕ್ಯುಸೆಕ್ಸ್ ನೀರು ಹರಿದು ಬರುತ್ತಿದ್ದು, ನೀರಿನೊಂದಿಗೆ ಮೊಸಳೆಗಳು ಸೇರಿದಂತೆ ಅನೇಕ ಜಲಚರ ಪ್ರಾಣಿಗಳು ಬರುತ್ತಿವೆ. ಇದರಿಂದ ಸಾರ್ವಜನಿಕರು ಎಚ್ಚರದಿಂದ ಇರುವಂತೆ ತಾಲೂಕು ಆಡಳಿತ ಮನವಿ ಮಾಡಿದೆ. ಪೊಲೀಸ್ ಸಿಬ್ಬಂದಿ, ಗ್ರಾಮಲೆಕ್ಕಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಗ್ರಾಪಂ ಅಧ್ಯಕ್ಷ ದೇವರವರ ಸರ್ಕಾರ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ. ಮೊಸಳೆ ದಾಳಿಯಿಂದ ಗಾಯಗೊಂಡ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಹರಾಷ್ಟ್ರದ ಮಿರಜ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 