ಜಿಲ್ಲೆಯ ರೈತರಿಗೆ ರೂ.28.84 ಕೋಟಿ ಬೆಳೆಹಾನಿ ಪರಿಹಾರ
Crop damage compensation of Rs. 28.84 crore to farmers in the district
ಹಾವೇರಿ 27 : ಪ್ರಸಕ್ತ ಸಾಲಿನಲ್ಲಿ ಅತಿವೃಷ್ಟಿಯಿಂದ ಉಂಟಾದ ಬೆಳೆಹಾನಿಗೆ ಜಿಲ್ಲೆಯ ರೈತರಿಗೆ ರೂ.28.84 ಕೋಟಿ ಬೆಳೆಹಾನಿ ಪರಿಹಾರ ಮಂಜೂರು ಮಾಡಲಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 16,801 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಎಸ್.ಡಿ.ಆರ್ಎಫ್ ಮಾರ್ಗಸೂಚಿ ಅನ್ವಯ ಈಗಾಗಲೇ 33,726 ರೈತರಿಗೆ ರೂ.14.66 ಕೋಟಿ ಡಿಬಿಟಿ ಮೂಲಕ ಜಮೆ ಮಾಡಲಾಗಿತ್ತು. ಇಂದು ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರು ಹೆಚ್ಚುವರಿಯಾಗಿ ಪ್ರತಿ ಹೆಕ್ಟೇರಗೆ ರೂ.8,500 ರಂತೆ ಜಿಲ್ಲೆಯ 33,725 ರೈತರ ಖಾತೆಗೆ ರೂ.14.18 ಕೋಟಿ ಬೆಳೆಹಾನಿ ಪರಿಹಾರ ಜಮೆಗೆ ಚಾಲನೆ ನೀಡಿದ್ದಾರೆ ಎಂದು ತಿಳಿಸಿದರು.
ಮಳೆಯಾಶ್ರಿತ, ನೀರಾವರಿ ಹಾಗೂ ತೋಟಗಾರಿಕೆ ಬೆಳೆಗಳ ಹಾನಿ ಜಂಟಿ ಸಮೀಕ್ಷೆಯನ್ನು ಜಿಲ್ಲಾಡಳಿತ ಅತ್ಯಂತ ಮುತುವರ್ಜಿಯಿಂದ ಮಾಡಿದ್ದು, ಜಿಲ್ಲೆಯ ರೈತರಿಗೆ ಸೂಕ್ತ ಪರಿಹಾರ ಕೊಡಿಸಲು ಉತ್ತಮವಾಗಿ ಕೆಲಸಮಾಡಿದ್ದಾರೆ ಎಂದರು.
ಮಾನ್ಯ ಮುಖ್ಯಮಂತ್ರಿಗಳು ಎಸ್.ಡಿ.ಆರ್ಎಫ್ ಹೊರತಾಗಿ ಪ್ರತಿ ಹೆಕ್ಟೇರಗೆ ರೂ.8,500 ರಂತೆ ಹೆಚ್ಚುವರಿಯಾಗಿ ಪರಿಹಾರ ನೀಡಿದ್ದು, ರಾಜ್ಯದ 27 ಜಿಲ್ಲೆಗಳಿಗೆ ರೂ.1,033 ಕೋಟಿ ಬೆಳೆಹಾನಿ ಪರಿಹಾರ ಮಂಜೂರು ಮಾಡಿದ್ದಾರೆ ಎಂದು ತಿಳಿಸಿದರು.
ಮೆಕ್ಕೆಜೋಳ ಬೆಂಬಲ ನಿಗದಿ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸಕ್ತ ಸಾಲಿನಲ್ಲಿ ಉತ್ತಮ ಮಳೆಯಾಗಿದ್ದು, ಮೆಕ್ಕೆಜೋಳ, ಕಬ್ಬು ಹಾಗೂ ಭತ್ತವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗಿದೆ. ಬೆಂಬಲ ಬೆಲೆ ನಿಗದಿಪಡಿಸಿರುವುದು ಕೇಂದ್ರ ಸರ್ಕಾರದ ಕೆಲಸವಾಗಿದೆ, ಅದನ್ನು ಕಾಲಕಾಲಕ್ಕೆ ಅವರು ಮಾಡಬೇಕು ಹಾಗೂ ಅವರು ಹೇಳಿದ ಕೆಲಸಮಾಡಲು ನಾವು ತಯಾರಿದ್ದೇವೆ. ರೈತರ ವಿಷಯದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದರು.
ಮಾಧ್ಯಮಗೋಷ್ಠಿಯಲ್ಲಿ ಶಾಸಕರು ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರ್ಪ ಮಾನಪ್ಪ ಲಮಾಣಿ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್ ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 