ಬೆಳೆ ಸಾಲ ಮನ್ನಾ ಯೋಜನೆ: ನೋಂದಣಿಗೆ ಸರತಿಯಲ್ಲಿ ನಿಲ್ಲದಂತೆ ಕ್ರಮ
ಗದಗ 18: ರಾಜ್ಯ ಸಕರ್ಾರದ ಸಾಲ ಮನ್ನಾ ಯೋಜನೆಯಡಿ ಅರ್ಹ ರೈತರು ಸಾಲ ಪಡೆದ ವಾಣಿಜ್ಯ ಬ್ಯಾಂಕ್ ಶಾಖೆಯಲ್ಲಿ ಸೂಚಿತ ದಾಖಲೆ ಸಲ್ಲಿಸಿ ನೊಂದಾಯಿಸಲು 2019 ರ ಜನೆವರಿ 31 ರವರೆಗೆ ಅವಕಾಶವಿದೆ. ರೈತರ ಅನುಕೂಲಕ್ಕೆ ಆಯಾ ಬ್ಯಾಂಕ್ ಶಾಖೆಯಿಂದ ದಿನ ವೇಳೆ ನಿಗದಿ ಪಡಿಸಿ ಟೋಕನ್ ನೀಡಿ ನೋಂದಣಿಗೆ ಅನುಕೂಲ ಕಲ್ಪಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ನುಡಿದರು. ಲಕ್ಷ್ಮೇಶ್ವರದಲ್ಲಿ ಪಹಣಿಗಾಗಿ ರೈತರು ಸರತಿಗಾಗಿ ಕಾಯುತ್ತಿದ್ದನ್ನು ಜಿಲ್ಲಾಧಿಕಾರಿಗಳು ವೀಕ್ಷಿಸಿದರು. ತದನಂತರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿನ ಕೆನರಾ ಬ್ಯಾಂಕ್ ಶಾಖೆ ಹಾಗೂ ಕನರ್ಾಟಕ ಗ್ರಾಮೀಣ ವಿಕಾಸ ಬ್ಯಾಂಕ್ ಶಾಖೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಬ್ಯಾಂಕ್ ಮುಂದೆ ರೈತರ ಸರತಿ ಸಾಲು ಕಂಡು ಅವರನ್ನುದ್ದೇಶಿಸಿ ಮಾತನಾಡಿ ಎಲ್ಲಿಯೂ ರೈತರು ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯಕತೆಯಿಲ್ಲ. ಜಿಲ್ಲೆಯ ಅರ್ಹ ರೈತರು ತಾವು ಸಾಲ ಪಡೆದ ಬ್ಯಾಂಕಿಗೆ ಶಾಖೆಯಿಂದ ಟೋಕನ್ ಪಡೆದು ನಿಗದಿತ ದಿನಾಂಕದಂದು ಬ್ಯಾಂಕಿಗೆ ಅವಶ್ಯಕ ದಾಖಲೆಗಳೊಂದಿಗೆ ಬಂದು ಹೆಸರು ನೊಂದಾಯಿಸಬೇಕು. ಈ ಯೋಜನೆಯಡಿ ಜಮೀನಿನ ಪಹಣಿ ಪತ್ರಿಕೆ ನೀಡುವ ಅವಶ್ಯಕತೆ ಇರುವುದಿಲ್ಲ. ಜಿಲ್ಲಾಡಳಿತ ಈ ಕುರಿತಂತೆ ನಿಗಾ ವಹಿಸಿದ್ದು ಯಾವುದೇ ಸಮಸ್ಯೆಗಳಿದ್ದರೂ ತಕ್ಷಣ ಅವುಗಳ ನಿವಾರಣೆಗೆ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಗದಗ ಜಿ.ಪಂ. ಅಧ್ಯಕ್ಷ ಎಸ್.ಪಿ. ಬಳಿಗಾರ, ತಹಶೀಲ್ದಾರ ಕೋರಿಶೆಟ್ಟರ್, ಕಂದಾಯ ಇಲಾಖೆ ಹಾಗೂ ಬ್ಯಾಂಕ್ ಸಿಬ್ಬಂದಿಗಳು ಹಾಜರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 