ಸ್ವಾಸ್ಥ್ಯ ಬದುಕಿಗೆ ಪರಿಸರ ಬೆಳೆಸಿ: ಶಂಕರಗೌಡ ಸೋಮನಾಳ
Cultivate an environment for healthy living: Shankaragowda Somanala
ಸ್ವಾಸ್ಥ್ಯ ಬದುಕಿಗೆ ಪರಿಸರ ಬೆಳೆಸಿ: ಶಂಕರಗೌಡ ಸೋಮನಾಳ
ವಿಜಯಪುರ, 05 : ಸ್ವಾಸ್ಥ್ಯ ಬದುಕಿಗೆ ಪರಿಸರ ಬೆಳೆಸಿ ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ಅಧ್ಯಯನ ವಿಭಾಗ ಮತ್ತು ಎನ್.ಎಸ್.ಎಸ್. ಕೋಶದ ವತಿಯಿಂದ ಗುರುವಾರ ಆಯೋಜಿಸಿದ್ದ ಪರಿಸರ ದಿನಾಚರಣೆಯನ್ನು ಸಸಿ ನೆಡುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ನಗರೀಕರಣದ ಧಾವಂತದಲ್ಲಿ ಇಂದು ಕಾಡು ನಾಶವಾಗುತ್ತಿದ್ದು, ‘ಕಾಡು ಕಡಿದು ನಾಡು ಬೆಳೆಸಿ’ ಎಂಬ ಮನೋಭಾವನೆ ಕಂಡುಬರುತ್ತದೆ. ಮುಂದಿನ ಪೀಳಿಗೆಯ ಆರೋಗ್ಯಕರ ಬದುಕಿಗೆ ಹಾಗೂ ಎಲ್ಲ ಜೀವರಾಶಿಗಳ ಸಂಕಲನದ ರಕ್ಷಣೆಗೆ ಪರಿಸರವನ್ನು ಉಳಿಸಿ ಬೆಳಸಬೇಕಾಗಿದೆ. ಪ್ರತಿ ವಿದ್ಯಾರ್ಥಿಯು ಸಸಿಗಳನ್ನು ನೆಟ್ಟು ಪೋಷಿಸಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಪ್ರೊ. ವಿಷ್ಣು ಶಿಂದೆ, ಪ್ರೊ. ಉದಯಕುಮಾರ ಕುಲಕರ್ಣಿ ಹಾಗೂ ಮತ್ತಿತರು ಉಪಸ್ಥಿತರಿದ್ದರು. ಎನ್.ಎಸ್.ಎಸ್. ಕೋಶದ ಸಂಯೋಜನಾಧಿಕಾರಿ ಪ್ರೊ. ಅಶೋಕ ಸುರಪುರ ಸ್ವಾಗತಿಸಿದರು. ಸಸ್ಯಶಾಸ್ತ್ರ ಅಧ್ಯಯನ ವಿಭಾಗದ ಸಂಯೋಜಕ ಡಾ. ನಟರಾಜ ದುರ್ಗಣ್ಣವರ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 