ಡಿ. ಉಷಾರಾಣಿ ಶಿಕ್ಷಕಿಗೆ (ಶಿಕ್ಷಣ ವಿದ್ಯಾರತ್ನ) ಪ್ರಶಸ್ತಿ ಪ್ರದಾನ
D. Usharani presented with the award (Shikshan Vidyaratna) to the teacher
ಬಳ್ಳಾರಿ 11: ಜ(11)ರಂದು ನಗರದಲ್ಲಿ ಸಾವಿತ್ರಿಬಾಯಿ ಫುಲೆ ಜಯಂತಿಯ ಅಂಗವಾಗಿ ಕಪ್ಪಗಲ್ಲು ರಸ್ತೆ, ದುರ್ಗಮ್ಮ ಗುಡಿ ಹಿಂಭಾಗದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಹಿಂದಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀಮತಿ ಡಿ. ಉಷಾರಾಣಿ ಅವರಿಗೆ ಅತ್ಯುತ್ತಮ ಶಿಕ್ಷಕಿ (ಶಿಕ್ಷಣ ವಿದ್ಯಾರತ್ನ) ಪ್ರಶಸ್ತಿ ಪ್ರದಾನ ಮಾಡಲಾಗಿದೆ.ಇತ್ತೀಚೆಗೆ ವಿಜಯವಾಡದಲ್ಲಿ ಗುರು ಚೈತನ್ಯ ಶಿಕ್ಷಕರ ಸಂಘದ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಮಹಿಳಾ ಶಿಕ್ಷಣದ ಪಿತಾಮಹಿ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆಯ ಗೌರವಾರ್ಥವಾಗಿ ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಈ ಗೌರವ ನೀಡಲಾಯಿತು. ಈ ವೇಳೆ ಮಾತನಾಡಿದ ಬಿ.ಸಿ. ವೆಲ್ಫೇರ್ ಪಾರ್ಟಿಯ ನಾಯಕ ರಾಮಚಂದ್ರ ಯಾದವ್, ವಿದ್ಯಾರ್ಥಿಗಳಲ್ಲಿ ಮೌಲ್ಯ, ನೈತಿಕತೆ ಮತ್ತು ಸಮಾನತೆಯ ಭಾವನೆ ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದೆಯೆಂದು ಹೇಳಿದರು.
ಮಹಿಳಾ ಶಿಕ್ಷಣಕ್ಕಾಗಿ ಸಾವಿತ್ರಿಬಾಯಿ ಫುಲೆ ಅವರು ಮಾಡಿದ ಸೇವೆ ಎಲ್ಲರಿಗೂ ಸ್ಪೂರ್ತಿಯಾಗಿದೆ ಎಂದರು.ಕೋವಿಡ್ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ತಟ್ಟೆಗಳು, ಕ್ರೀಡಾ ಕಿಟ್ಗಳು ಸೇರಿದಂತೆ ವಿವಿಧ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಕೈಗೊಂಡ ಹಿನ್ನೆಲೆಯಲ್ಲಿ ಈ ಪ್ರಶಸ್ತಿ ಲಭಿಸಿದೆ ಎಂದು ಶಿಕ್ಷಕಿ ಉಷಾರಾಣಿ ತಿಳಿಸಿದರು. ಈ ಗೌರವವು ಹೆಚ್ಚಿನ ಜವಾಬ್ದಾರಿಯನ್ನು ನೀಡಿದ್ದು, ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಇನ್ನಷ್ಟು ಶ್ರಮಿಸುವುದಾಗಿ ಹೇಳಿದರು.ಈ ಕಾರ್ಯಕ್ರಮದಲ್ಲಿ ಗುರು ಚೈತನ್ಯ ಶಿಕ್ಷಕರ ಸಂಘದ ಅಧ್ಯಕ್ಷ ರಾಮಾಂಜನೇಯುಲು ಯಾದವ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್. ರಾಮ, ಕಾರ್ಯದರ್ಶಿ ಡಾ. ಶೈಲಜಾ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 