ವೈಯಕ್ತಿಕ ಟೀಕೆಗೆ ಡಿ.ವಿ.ಸದಾನಂದ ಗೌಡ ಗರಂ: ಟ್ವಿಟರ್ ಮೂಲಕ ಟಾಂಗ್
ಬೆಂಗಳೂರು 29: ವೈಯಕ್ತಿಕವಾಗಿ ಆರೋಪ ಮಾಡಿದ್ದಕ್ಕೆ ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯಥರ್ಿ ಡಿ.ವಿ.ಸದಾನಂದ ಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಟ್ವಿಟರ್ ಮೂಲಕ ಟಾಂಗ್ ನೀಡಿದ್ದಾರೆ. ಹೌದು ನನ್ನದು ನಗು ಮುಖ, ನನ್ನ ಆಲೋಚನೆಗಳು ಯಾವತ್ತೂ ಧನಾತ್ಮಕ. ಅದಕ್ಕೆ ನಾನು ನಗು ಮುಖದಲ್ಲಿ ಇರುತ್ತೇನೆ. ಗಂಡನನ್ನು ಕಳೆದುಕೊಂಡವರ ಬಗ್ಗೆ ಕೀಳಾಗಿ ಮಾತನಾಡುವ ಋಣಾತ್ಮಕ ಚಿಂತನೆ ನನಗೆ ಯಾವತ್ತೂ ಬಂದಿಲ್ಲ. ಅಧಿಕಾರಕ್ಕೋಸ್ಕರ ಬದುಕಿ ಬಂದ ಸಿದ್ಧಾಂತದೊಂದಿಗೆ ರಾಜಿ ಮಾಡಿಕೊಂಡು ಹೀನವಾಗಿ ಬದುಕುವ ಜಾಯಮಾನ ನನ್ನದಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರದ ಸಂಸದನಾಗಿ ನಾನೇನು ಮಾಡಿದ್ದೇನೆ ಎಂದು ನನ್ನ ಜನರಿಗೆ ಗೊತ್ತಿದೆ. ಸಾಂದಭರ್ಿಕ ಮೈತ್ರಿ ಮಾಡಿಕೊಂಡು ಜನರನ್ನು ಏಮಾರಿಸಲು ಹೊರಟ ಹಗಲು ವೇಷಗಾರರಿಗೆ ಮನದಟ್ಟು ಮಾಡುವ ಅಗತ್ಯ ನನಗಿಲ್ಲ. ನಮ್ಮೊಂದಿಗೆ ಮೋದಿಯಂತಹ ಮೋದಿಜಿಯವರಿದ್ದಾರೆ. ಮೋದಿಜಿಯವರ ಜೊತೆಗಿದ್ದರೆ ದೇಶ ಸುರಕ್ಷಿತ ಎನ್ನುವ ಕೋಟಿ ಕೋಟಿ ಜನರಿದ್ದಾರೆ. ನೀವು ಎದೆಯುಬ್ಬಿಸಿ 2/3 ಹೇಳಿಕೊಳ್ಳುವಂತಹ ನಿಷ್ಕಳಂಕ ಚಾರಿತ್ರ್ಯದ ಒಬ್ಬನೇ ಒಬ್ಬ ನಾಯಕ ನಿಮ್ಮಲ್ಲಿದ್ದಾನೆ ಎನ್ನುವ ಛಾತಿ ನಿಮಗಿದೆಯಾ ? ರಾಜಕೀಯವನ್ನು ರಾಜಕೀಯವಾಗಿ ನಡೆಸಿ, ವೈಯಕ್ತಿಕ ನಿಂದನೆ ನಿಮ್ಮ ತೂಕವನ್ನು ಅಳೆಯುತ್ತದೆ ಎನ್ನುವ ಭಾವನೆ ನಿಮಗಿರಲಿ. ಜನ ಗಮನಿಸುತ್ತಾರೆಂಬ ಕನಿಷ್ಠ ಪ್ರಜ್ಞೆ ಕೂಡ ಇರಲಿ ಎಂದು ಮೈತ್ರಿ ಪಕ್ಷದ ಮುಖಂಡರಿಗೆ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸದಾನಂದ ಗೌಡ ಅವರ ವಿರುದ್ಧ ಚುನಾವಣಾ ಪ್ರಚಾರ ಸಭೆಯಲ್ಲಿ ಟೀಕಿಸಿದ್ದರಿಂದ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 