ಕೊಳಗೇರಿ ಜನರ ಸಂಕಷ್ಟ ಆಲಿಸಲು ದಲಿತ ಕರ್ನಾಟಕ ಸಂಘಟನೆಯಿಂದ ಜಿಲ್ಲಾಧಿಕಾರಿಗೆ ಮನವಿ
Dalit Karnataka organization appeals to the District Collector to listen to the plight of slum dwel
ವಿಜಯಪುರ 23: ನಗರ ಹಾಗೂ ತಾಲೂಕು ಕೊಳಚೆ ಪ್ರದೇಶಗಳಲ್ಲಿನ ಜನರ ಬೇಡಿಕೆಗಳನ್ನು ಆಲಿಸುವಂತೆ ದಲಿತ ಸ್ವರಾಜ್ಯ ಸೇನೆ- ಕರ್ನಾಟಕ ಸಂಘಟನೆಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಸಂಘಟನೆ ಅಧ್ಯಕ್ಷ ಗೌಡಪ್ಪ ಬಡಿಗೇರ ಮಾತನಾಡಿ, ಜಿಲ್ಲೆಯಲ್ಲಿ 38ಅ ಕ್ಕೂ ಹೆಚ್ಚು ಕುಟುಂಬಗಳು ಕೊಳಚೆ ಪ್ರದೇಶಗಳಲ್ಲಿ ಕನಿಷ್ಠ ನಾಗರಿಕ ಸೌಲಭ್ಯಗಳಿಂದಲೂ ವಂಚಿತರಾಗಿ ಬದುಕುತ್ತಿದ್ದಾರೆ. ಇವರುಗಳ ಬದುಕು ನಿತ್ಯ ನರಕವಾಗಿದೆ ಎಂದರು.
ಗೌರವಯುತ ಜೀವನ ಮತ್ತು ಆರೋಗ್ಯಕರ ವಾತಾವರಣ ಪ್ರತಿಯೋರ್ವನ ಹಕ್ಕು. ಸಂವಿಧಾನ ಒದಗಿಸಿದ ಬದುಕುವ ಹಕ್ಕುಗಳನ್ನು ರಕ್ಷಿಸುವಂತೆ ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದ್ದೆವೆ. ಅವರು ಕೂಡ ಸಮಸ್ಯೆ ಆಲಿಸುವುದಾಗಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು. ಕೊಳಚೆ ನಿವಾಸಿಗಳ ಕುಂದು ಕೊರತೆ ಆಲಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳನ್ನೂಳಗೊಂಡ ಸಭೆ ಕರೆಯುವಂತೆ ಜಿಲ್ಲಾಧಿಕಾರಿಗಳಿಗೆ ಹಕ್ಕೊತ್ತಾಯ ಗಳ ಪಟ್ಟಿ ಮೂಲಕ ಕೋರಿದರು. ಈ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳಾದ ಅಮೃತ್, ಪರಶುರಾಮ್, ಆದಿತ್ಯ, ಶರಣು, ಸಾಗರ್, ತೌಫಿಕ್, ಕಿರಣ್, ಇಮ್ರಾನ್, ಚನ್ನು, ಸುಭಾಷ್, ಪರಮೇಶ್, ಆನಂದ್, ಬಾಳು, ಗೋಪಾಲ್, ಸದು, ಅರ್ಜುನ್ ಇತರರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 