ನೆರೆಹಾವಳಿಯಿಂದ ಹಾನಿ: 700ಕ್ಕೂ ಅಧಿಕ ಭತ್ತದ ಚೀಲಗಳ ವಿತರಣೆ
ಲೋಕದರ್ಶನ ವರದಿ
ಗೋಕಾಕ: ನೆರೆ ಹಾವಳಿಯಿಂದ ಹಾನಿಗೊಳಗಾದ ಸುಮಾರು 15 ಲಕ್ಷಕ್ಕೂ ಹೆಚ್ಚು ಬೆಲೆಯ 700ಕ್ಕೂ ಅಧಿಕ ಭತ್ತದ ಚೀಲಗಳನ್ನು ರೈತರ ಜಾನುವಾರುಗಳಿಗೆ ನೀಡಿ ಮಾನವೀಯತೆಯನ್ನು ಮೆರೆದಿದ್ದಾರೆ,
ಇಲ್ಲಿಯ ವಾಲ್ಮೀಕಿ ವೃತ್ತದ ಎಪಿಎಮ್ಸಿ ರಸ್ತೆಯಲ್ಲಿ ಕಳೆದ ಕೆಲದಿನಗಳ ಹಿಂದೆ ಬಂದ ಪ್ರವಾಹದಿಂದ ಚುನಮರಿ ಬಟ್ಟಿಯಲ್ಲಿ ಶೇಖರಿಸಿಟ್ಟ ಬತ್ತದ ಚೀಲಗಳು ನೀರಿನಲ್ಲಿ ತೊಯ್ದು ಹೋಗಿದ್ದವು. ಚುನಮರಿ ಬಟ್ಟಿಯ ಮಾಲಿಕ ಮಾರುತಿ ಗೌಡರ ಅವರು ಬತ್ತದ ಚೀಲಗಳನ್ನು ಒಣಗಿಸಿ ಮರುಬಳಕೆ ಮಾಡಬಹುದಾಗಿತ್ತು. ಆದರೆ ಅದಕ್ಕೆ ಅವರು ಮಹತ್ವವನ್ನು ನೀಡದೇ ಪ್ರವಾಹದಿಂದಾಗಿ ಆಗಿರುವ ಮೇವಿನ ಕೊರತೆಯನ್ನು ಅರಿತು ರೈತರನ್ನು ಕರೆದು ಕಳೆದ 4 ದಿನಗಳಿಂದ ರೈತರ ಜಾನುವಾರುಗಳಿಗೆ ಆಹಾರವಾಗಿ ಉಪಯೋಗಿಸಲು ಉಚಿತವಾಗಿ ವಿತರಿಸುತ್ತಿದ್ದಾರೆ.
ಈ ಸಂದರ್ಭದಲ್ಲಿ ಬಸಪ್ಪ ರಂಕನಕೊಪ್ಪ, ಈರಪ್ಪ ನೇರಲಿ ಸೇರಿದಂತೆ ಅನೇಕ ರೈತರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 