ನೆರೆಹಾವಳಿಯಿಂದ ಹಾನಿ: 700ಕ್ಕೂ ಅಧಿಕ ಭತ್ತದ ಚೀಲಗಳ ವಿತರಣೆ
ಲೋಕದರ್ಶನ ವರದಿ
ಗೋಕಾಕ: ನೆರೆ ಹಾವಳಿಯಿಂದ ಹಾನಿಗೊಳಗಾದ ಸುಮಾರು 15 ಲಕ್ಷಕ್ಕೂ ಹೆಚ್ಚು ಬೆಲೆಯ 700ಕ್ಕೂ ಅಧಿಕ ಭತ್ತದ ಚೀಲಗಳನ್ನು ರೈತರ ಜಾನುವಾರುಗಳಿಗೆ ನೀಡಿ ಮಾನವೀಯತೆಯನ್ನು ಮೆರೆದಿದ್ದಾರೆ,
ಇಲ್ಲಿಯ ವಾಲ್ಮೀಕಿ ವೃತ್ತದ ಎಪಿಎಮ್ಸಿ ರಸ್ತೆಯಲ್ಲಿ ಕಳೆದ ಕೆಲದಿನಗಳ ಹಿಂದೆ ಬಂದ ಪ್ರವಾಹದಿಂದ ಚುನಮರಿ ಬಟ್ಟಿಯಲ್ಲಿ ಶೇಖರಿಸಿಟ್ಟ ಬತ್ತದ ಚೀಲಗಳು ನೀರಿನಲ್ಲಿ ತೊಯ್ದು ಹೋಗಿದ್ದವು. ಚುನಮರಿ ಬಟ್ಟಿಯ ಮಾಲಿಕ ಮಾರುತಿ ಗೌಡರ ಅವರು ಬತ್ತದ ಚೀಲಗಳನ್ನು ಒಣಗಿಸಿ ಮರುಬಳಕೆ ಮಾಡಬಹುದಾಗಿತ್ತು. ಆದರೆ ಅದಕ್ಕೆ ಅವರು ಮಹತ್ವವನ್ನು ನೀಡದೇ ಪ್ರವಾಹದಿಂದಾಗಿ ಆಗಿರುವ ಮೇವಿನ ಕೊರತೆಯನ್ನು ಅರಿತು ರೈತರನ್ನು ಕರೆದು ಕಳೆದ 4 ದಿನಗಳಿಂದ ರೈತರ ಜಾನುವಾರುಗಳಿಗೆ ಆಹಾರವಾಗಿ ಉಪಯೋಗಿಸಲು ಉಚಿತವಾಗಿ ವಿತರಿಸುತ್ತಿದ್ದಾರೆ.
ಈ ಸಂದರ್ಭದಲ್ಲಿ ಬಸಪ್ಪ ರಂಕನಕೊಪ್ಪ, ಈರಪ್ಪ ನೇರಲಿ ಸೇರಿದಂತೆ ಅನೇಕ ರೈತರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 