ನೆರೆಹಾವಳಿಯಿಂದ ಹಾನಿ: 700ಕ್ಕೂ ಅಧಿಕ ಭತ್ತದ ಚೀಲಗಳ ವಿತರಣೆ
ಲೋಕದರ್ಶನ ವರದಿ
ಗೋಕಾಕ: ನೆರೆ ಹಾವಳಿಯಿಂದ ಹಾನಿಗೊಳಗಾದ ಸುಮಾರು 15 ಲಕ್ಷಕ್ಕೂ ಹೆಚ್ಚು ಬೆಲೆಯ 700ಕ್ಕೂ ಅಧಿಕ ಭತ್ತದ ಚೀಲಗಳನ್ನು ರೈತರ ಜಾನುವಾರುಗಳಿಗೆ ನೀಡಿ ಮಾನವೀಯತೆಯನ್ನು ಮೆರೆದಿದ್ದಾರೆ,
ಇಲ್ಲಿಯ ವಾಲ್ಮೀಕಿ ವೃತ್ತದ ಎಪಿಎಮ್ಸಿ ರಸ್ತೆಯಲ್ಲಿ ಕಳೆದ ಕೆಲದಿನಗಳ ಹಿಂದೆ ಬಂದ ಪ್ರವಾಹದಿಂದ ಚುನಮರಿ ಬಟ್ಟಿಯಲ್ಲಿ ಶೇಖರಿಸಿಟ್ಟ ಬತ್ತದ ಚೀಲಗಳು ನೀರಿನಲ್ಲಿ ತೊಯ್ದು ಹೋಗಿದ್ದವು. ಚುನಮರಿ ಬಟ್ಟಿಯ ಮಾಲಿಕ ಮಾರುತಿ ಗೌಡರ ಅವರು ಬತ್ತದ ಚೀಲಗಳನ್ನು ಒಣಗಿಸಿ ಮರುಬಳಕೆ ಮಾಡಬಹುದಾಗಿತ್ತು. ಆದರೆ ಅದಕ್ಕೆ ಅವರು ಮಹತ್ವವನ್ನು ನೀಡದೇ ಪ್ರವಾಹದಿಂದಾಗಿ ಆಗಿರುವ ಮೇವಿನ ಕೊರತೆಯನ್ನು ಅರಿತು ರೈತರನ್ನು ಕರೆದು ಕಳೆದ 4 ದಿನಗಳಿಂದ ರೈತರ ಜಾನುವಾರುಗಳಿಗೆ ಆಹಾರವಾಗಿ ಉಪಯೋಗಿಸಲು ಉಚಿತವಾಗಿ ವಿತರಿಸುತ್ತಿದ್ದಾರೆ.
ಈ ಸಂದರ್ಭದಲ್ಲಿ ಬಸಪ್ಪ ರಂಕನಕೊಪ್ಪ, ಈರಪ್ಪ ನೇರಲಿ ಸೇರಿದಂತೆ ಅನೇಕ ರೈತರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 