ಹಿಪ್ಪರಗಿ ಜಲಾಶಯದ 22ನೇ ಗೇಟ್ಗೆ ಹಾನಿ: ಅಪಾರ ಪ್ರಮಾಣದ ನೀರು ಪೋಲು
Damage to the 22nd gate of the Hipparagi reservoir: Huge amount of water lost
ಜಮಖಂಡಿ 08: ತಾಲೂಕಿನ ಹಿಪ್ಪರಗಿ ಜಲಾಶಯದ 22ನೇ ಗೇಟ್ ಕಿತ್ತು ಹೋಗಿದ್ದು ಅಪಾರ ಪ್ರಮಾಣದ ನೀರು ನದಿ ಪಾತ್ರದಿಂದ ಹರಿದು ಹೋಗುತ್ತಿದೆ. ಜಲಾಶಯದಲ್ಲಿ 6 ಟಿಎಂಸಿ ನೀರು ಸಂಗ್ರಹವಿದೆ, ಈ ನೀರನ್ನು ಬರುವ ಮಳೆಗಾಲದವರೆಗೆ ಜಮಖಂಡಿ ಮತ್ತಿತರ ನಗರಗಳಿಗೆ ಕುಡಿಯುವ ನೀರು ಪೂರೈಕೆ ಹಾಗೂ ಜಲಾಶಯದ ಹಿಂಭಾಗದ ರೈತರ ಜಮಿನುಗಳಿಗೆ ನೀರು ಒದಗಿಸಲು ಬಳಸಲಾಗುತ್ತದೆ. ಆದರೆ 22ನೇ ಗೇಟ್ ಕಳಚಿ ಹೋಗಿರುವದರಿಂದ ಸಂಗ್ರಹವಿದ್ದ ನೀರು ಹರಿದು ಹೋಗಿ ಬೇಸಿಗೆಯಲ್ಲಿ ತೊಂದರೆ ಉಂಟಾಗಬಹುದು ಎಂದು ಆತಂಕ ಮೂಡಿಸಿದೆ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದರು.
ತಾಲೂಕಿನ ಹಿಪ್ಪರಗಿ ಜಲಾಶಯದ 22ನೇ ಗೇಟ್ ಕಿತ್ತು ಹೋಗಿದ್ದು ಬ್ಯಾರೇಜ್ಗೆ ಭೇಟಿ ನೀಡಿ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಪ್ಪರಗಿ ಜಲಾಶಯದಲ್ಲಿ ಗೇಟ್ ಅಳವಡಿಕೆಯ ಕಾರ್ಯ ಭರದಿಂದ ನಡೆದಿದ.ೆ ಆದಷ್ಟು ಬೇಗನೇ ಗೇಟ್ ಅಳವಡಿಸಲು ಕ್ರಮ ಜರುಗಿಸಲಾಗುತ್ತಿದೆ. ಈ ಕುರಿತು ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಚಿವರೊಂದಿಗೆ ಚರ್ಚಿಸಿದ್ದೇನೆ ಎಂದರು. ಇದೇ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು, ಪಕ್ಷದ ಮುಖಂಡ ಸಿದ್ದು ಕೊಣ್ಣೂರ ಸೇರಿದಂತೆ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 