ಎಸ್ಡಿಎಂಸಿಯ ನೂತನ ಅಧ್ಯಕ್ಷರಾಗಿ ದಮ್ಮೂರು ತಿಪ್ಪೇಸ್ವಾಮಿ ಮತ್ತು ಉಪಾಧ್ಯಕ್ಷರಾಗಿ ದೊಡ್ಡ ನಿಂಗಪ್ಪ ವಾಲ್ಮೀಕಿ ಆಯ್ಕೆ
Dammur Thippeswamy elected as new SDMC president and Dodda Ningappa Valmiki elected as vice preside
ಕಂಪಿ 24: ತಾಲೂಕಿನ ನಂ.10 ಮುದ್ದಾಪುರ ಗ್ರಾಪಂಯ ಯಲ್ಲಮ್ಮ ಕ್ಯಾಂಪಿನಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್ಡಿಎಂಸಿಯ ನೂತನ ಅಧ್ಯಕ್ಷರಾಗಿ ದಮ್ಮೂರು ತಿಪ್ಪೇಸ್ವಾಮಿ ಮತ್ತು ಉಪಾಧ್ಯಕ್ಷರಾಗಿ ದೊಡ್ಡ ನಿಂಗಪ್ಪ ವಾಲ್ಮೀಕಿ ಅವಿರೋಧವಾಗಿ ಆಯ್ಕೆಗೊಂಡರು. ಇಲ್ಲಿನ ಶಾಲೆಯಲ್ಲಿ ನಡೆದ ಪೋಷಕರ ಸಭೆಯಲ್ಲಿ ಎಸ್ಡಿಎಂಸಿಗೆ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಎಲ್ಲರ ಒಮ್ಮತದಿಂದ ನಡೆಯಿತು. ನಂತರ ಕರವೇ ತಾಲೂಕು ಅಧ್ಯಕ್ಷ ಬಳೆ ಮಲ್ಲಿಕಾರ್ಜುನ ಮಾತನಾಡಿ, ಶಾಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು. ನಂತರ ನೂತನ ಅಧ್ಯಕ್ಷ ತಿಪ್ಪೇಸ್ವಾಮಿ ಮಾತನಾಡಿ, ಶಿಕ್ಷಕರ ಹಾಗೂ ಸದಸ್ಯರ, ಸ್ಥಳೀಯ ಮುಖಂಡರ ಸಹಕಾರದೊಂದಿಗೆ ಶಾಲಾ ಅಭಿವೃದ್ಧಿಗೆ ಅಗಲಿರುಳು ಶ್ರಮಿಸುತ್ತೇನೆ ಎಂದರು. ನಂತರ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಮಾಲಾರೆ್ಣ ಮೂಲಕ ಗೌರವಿಸಿದರು. ಈ ಸಂದರ್ಭದಲ್ಲಿ ಮುಖ್ಯಗುರು ಜೆ.ವೆಂಕೋಬಪ್ಪ, ಸಹಶಿಕ್ಷಕ ಇಮಾಮ್ಸಾಬ್, ಮುಖಂಡರಾದ ಪರಶುರಾಮ, ಹುಲುಗಪ್ಪ, ಗಿಣಿ, ಹೊನ್ನುರಸ್ವಾಮಿ, ಬಾಬು, ಹೊನ್ನುರವಲಿ, ಕಜ್ಜಿ ನಾಗಪ್ಪ ವಾಲ್ಮೀಕಿ, ಕುರುಬರ ಚಂದ್ರಶೇಖರ ಸೇರಿದಂತೆ ಮಹಿಳೆಯರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 