ದಾನಮ್ಮದೇವಿ ಸಭಾಮಂಟಪ ಭೂಮಿ ಪೂಜೆ
Danammadevi Sabhamantapa Bhoomi Puja
ದಾನಮ್ಮದೇವಿ ಸಭಾಮಂಟಪ ಭೂಮಿ ಪೂಜೆ
ಇಂಡಿ 27: ಭಕ್ತಿಯಿಂದ ಪ್ರಾರ್ಥನೆ ಮಾಡಿದವರಿಗೆ ವರದ ಹಸ್ತವನ್ನು ನೀಡುವ ವರದಾನೇಶ್ವರಿಯೆಂದೇ ಪ್ರಖ್ಯಾತಳಾದ ದಾನಮದೇವಿಯ ಹೆಸರಿನಲ್ಲಿ ಸಭಾಭವನ ನಿರ್ಮಿಸುವ ಮೂಲಕ ಆಧ್ಯಾತ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ಕೆ ಸಭಾಭವನ ಅಣಿಯಾಗಲಿಯೆಂದು ಶಿರಶ್ಯಾಡದ ಅಭಿನವ ಮುರುಘೇಂದ್ರ ಶ್ರೀಗಳು ಹೇಳಿದರು. ನಗರದ ದಾನಮ್ಮದೇವಿ ದೇವಸ್ಥಾನದ ಪಕ್ಕದಲ್ಲಿ ವರದಾನೇಶ್ವರಿ ದಾನಮ್ಮದೇವಿ ಸಭಾಮಂಟಪದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ದೇವಸ್ಥಾನ ಕಮಿಟಿ ಅಧ್ಯಕ್ಷ ಉದ್ದಿಮೆದಾರ ಅನಿಲ ಪ್ರಸಾದ ಏಳಗಿ, ಸಿದ್ಧ ಸಿರಿ ಬ್ಯಾಂಕಿನ ನಿರ್ದೇಶಕ ಜಗದೀಶ ಕ್ಷತ್ರಿ, ರಮೇಶ ಗುತ್ತೆದಾರ, ಬಿಜೆಪಿ ಮುಖಂಡ ಕಾಸುಗೌಡ ಬಿರಾದಾರ, ಅರವಿಂದ್ ಹಂಜಗಿ, ಮಲ್ಲಿಕಾರ್ಜುನ ಬುರಕುಲೆ, ಪ್ರಭು ದೇಸಾಯಿ, ದಾನಮ್ಮ ದೇವಿ ದೇವಸ್ಥಾನದ ಸದಸ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 