ದಾಂಡೇಲಿ ವಿಶ್ವ ಮಹಿಳಾ ದಿನಾಚರಣೆ
Dandeli International Women's Day Celebration
ದಾಂಡೇಲಿ ಮಾ. 8 : ಹಳೇ ದಾಂಡೇಲಿಯ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಧಾರವಾಡ ಗ್ರಾಮಾಂತರ ವಿಭಾಗ ದಾಂಡೇಲಿ ಘಟಕ ಮತ್ತು ತಾಲೂಕು ಕಾನೂನು ಸೇವಾ ಸಮಿತಿ ದಾಂಡೇಲಿ ಇವುಗಳ ಸಂಯುಕ್ತ ಆಶ್ರಯದಲ್ಲಿ ರವಿವಾರ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಸ್ಥಳೀಯ ಜೆ.ಎಮ್.ಎಫ್.ಸಿ ನ್ಯಾಯಾಧೀಶರಾದ ತೇಜಸ್ವಿನಿ ಸೊಗಲದ ಅವರು ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಇಂದು ಮಹಿಳೆಯರು ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ, ಅರ್ಥವ್ಯವಸ್ಥೆಯ ಬೆಳವಣಿಗೆಯಲ್ಲೂ ಮಹಿಳೆಯರ ಪಾತ್ರ ದಿನೆ ದಿನೆ ಹೆಚ್ಚುತ್ತಿದೆ. ಮಹಿಳೆಯರ ಸಬಲೀಕರಣದ ಬಗ್ಗೆ ಮತ್ತು ಸಮಾನ ಅವಕಾಶಗಳ ಬಗ್ಗೆ ಪರಿಣಾಮಕಾರಿ ಕ್ರಮ ಜರುಗಬೇಕು ಎಂದು ನುಡಿದರು. ವೇದಿಕೆಯ ಮೇಲೆ ಹಿರಿಯ ವಕೀಲರಾದ ರಾಘವೇಂದ್ರ ವಿ. ಗಡೆಪ್ಪನವರ್, ಸಾರಿಗೆ ವ್ಯವಸ್ಥಾಪಕ, ಎ.ಪಿ.ಪಿ ರಮೇಶ ಬಂಕಾಪೂರ ವಕೀಲರಾದ ಕವಿತಾ ಕೆಂಚಪ್ಪನವರ್, ಮತ್ತು ರಾಜ್ಯ ಸಾರಿಗೆ ವಿಭಾಗದ ಮಹಿಳಾ ಸಿಬ್ಬಂದಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 