ದಾಂಡೇಲಿ ವಿಶ್ವ ಮಹಿಳಾ ದಿನಾಚರಣೆ
Dandeli International Women's Day Celebration
ದಾಂಡೇಲಿ ಮಾ. 8 : ಹಳೇ ದಾಂಡೇಲಿಯ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಧಾರವಾಡ ಗ್ರಾಮಾಂತರ ವಿಭಾಗ ದಾಂಡೇಲಿ ಘಟಕ ಮತ್ತು ತಾಲೂಕು ಕಾನೂನು ಸೇವಾ ಸಮಿತಿ ದಾಂಡೇಲಿ ಇವುಗಳ ಸಂಯುಕ್ತ ಆಶ್ರಯದಲ್ಲಿ ರವಿವಾರ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಸ್ಥಳೀಯ ಜೆ.ಎಮ್.ಎಫ್.ಸಿ ನ್ಯಾಯಾಧೀಶರಾದ ತೇಜಸ್ವಿನಿ ಸೊಗಲದ ಅವರು ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಇಂದು ಮಹಿಳೆಯರು ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ, ಅರ್ಥವ್ಯವಸ್ಥೆಯ ಬೆಳವಣಿಗೆಯಲ್ಲೂ ಮಹಿಳೆಯರ ಪಾತ್ರ ದಿನೆ ದಿನೆ ಹೆಚ್ಚುತ್ತಿದೆ. ಮಹಿಳೆಯರ ಸಬಲೀಕರಣದ ಬಗ್ಗೆ ಮತ್ತು ಸಮಾನ ಅವಕಾಶಗಳ ಬಗ್ಗೆ ಪರಿಣಾಮಕಾರಿ ಕ್ರಮ ಜರುಗಬೇಕು ಎಂದು ನುಡಿದರು. ವೇದಿಕೆಯ ಮೇಲೆ ಹಿರಿಯ ವಕೀಲರಾದ ರಾಘವೇಂದ್ರ ವಿ. ಗಡೆಪ್ಪನವರ್, ಸಾರಿಗೆ ವ್ಯವಸ್ಥಾಪಕ, ಎ.ಪಿ.ಪಿ ರಮೇಶ ಬಂಕಾಪೂರ ವಕೀಲರಾದ ಕವಿತಾ ಕೆಂಚಪ್ಪನವರ್, ಮತ್ತು ರಾಜ್ಯ ಸಾರಿಗೆ ವಿಭಾಗದ ಮಹಿಳಾ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 