ಸಾಲಬಾಧೆ: ವಿಷ ಸೇವಿಸಿ ರೈತ ಆತ್ಮಹತ್ಯೆ
ಬೈಲಹೊಂಗಲ 30: ತಾಲೂಕಿನ ತಿಗಡಿ ಗ್ರಾಮದ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರೇವಪ್ಪಾ ಮಲ್ಲಪ್ಪಾ ಒಡೆಯರ (50) ಮೃತ ರೈತ. ಶುಕ್ರವಾರ ರಾತ್ರಿ ಮನೆಯಿಂದ ಹೋಗಿದ್ದ ರೈತ ತನ್ನ ಜಮೀನ ಪಕ್ಕದಲ್ಲಿ ವಿಷದ ಬಾಟಲಿಯೊಂದಿಗೆ ಶವವಾಗಿ ಪತ್ತೆಯಾಗಿದ್ದಾನೆ.
ಕಳೆದ ನಾಲ್ಕು ವರ್ಷಗಳಿಂದ ಯಾವುದೇ ಬೆಳೆ ಬಾರದೆ ಆಥರ್ಿಕವಾಗಿ ಜಜರ್ಿತನಾಗಿದ್ದ ರೈತ ಕೈತುಂಬ ಸಾಲ ಮಾಡಿಕೊಂಡಿದ್ದನೆಂದು ಗ್ರಾಮಸ್ಥರು ವಿಕಗೆ ತಿಳಿಸಿದ್ದಾರೆ. ಕೆವಿಜಿ ಬ್ಯಾಂಕ್ನಲ್ಲಿ 27ಸಾವಿರ ರೂ.ಸೇರಿದಂತೆ ಖಾಸಗಿ, ಕೈಗಡ ಆಗಿ ಒಟ್ಟು 2.5 ಲಕ್ಷ ರೂ.ಸಾಲ ಮಾಡಿದ್ದನೆಂದು ಗೊತ್ತಾಗಿದೆ. ಸಾಲ ಮಾಡಿ ಇಬ್ಬರು ಹೆಣ್ಣು ಮಕ್ಕಳ ಮದುವೆ ಮಾಡಿದ್ದ, ಇನ್ನೊಬ್ಬ ಮಗಳ ಮದುವೆ ಮಾಡಬೇಕಾಗಿತ್ತು. ಅಷ್ಟರಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾನೆ.
ತಿಗಡಿ ಗ್ರಾಮದ ಹದ್ದಿಯಲ್ಲಿ ಮೂವರು ಅಣ್ಣ ತಮ್ಮಂದಿರ ಮಧ್ಯೆ ಎರಡು ಎಕರೆ 20 ಗುಂಟೆ ಜಮೀನು ಹೊಂದಲಾಗಿದೆ. ಪ್ರಕರಣ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಸ್ಥಳಕ್ಕೆ ಗ್ರಾ.ಪಂ.ಅಧ್ಯಕ್ಷ ಮುನ್ನಾ ಬಹದೂರಸಿ ಹಾಗೂ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 