ಗ್ರಾಮ ಪಂಚಾಯಿತಿಗಳು ಬಲಗೊಂಡಾಗ ಅಧಿಕಾರ ವಿಕೇಂದ್ರೀಕರಣಕ್ಕೆ ಅರ್ಥ: ಚನ್ನರಾಜ ಹಟ್ಟಿಹೊಳಿ
Decentralization means when Gram Panchayats are strengthened: Channaraja Hattiholi
ಗ್ರಾಮ ಪಂಚಾಯಿತಿಗಳು ಬಲಗೊಂಡಾಗ ಅಧಿಕಾರ ವಿಕೇಂದ್ರೀಕರಣಕ್ಕೆ ಅರ್ಥ: ಚನ್ನರಾಜ ಹಟ್ಟಿಹೊಳಿ
ಬೈಲಹೊಂಗಲ 04 : ಬೈಲಹೊಂಗಲ ತಾಲೂಕಿನ ವಕ್ಕುಂದ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮೊದಲನೆ ಮಹಡಿ ಕಟ್ಟಡವನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉದ್ಘಾಟಿಸಿದರು.ಗ್ರಾಮ ಪಂಚಾಯಿತಿಗಳು ಬಲಗೊಂಡಾಗ ಅಧಿಕಾರ ವಿಕೇಂದ್ರೀಕರಣಕ್ಕೆ ಅರ್ಥ ಬರುತ್ತದೆ. ಹಳ್ಳಿಗಳಿಗೆ ಹೆಚ್ಚಿನ ಅಧಿಕಾರ ಸಿಗಬೇಕು. ಹಾಗಾಗಿ ಗ್ರಾಮ ಸಭೆಗಳು ಹೆಚ್ಚಾಗಿ ನಡೆಯಬೇಕು. ಸ್ಥಳೀಯ ಆಡಳಿತಗಳು ಜನರಿಗೆ ನಿಸ್ವಾರ್ಥದಿಂದ ಸೇವೆ ಸಲ್ಲಿಸಬೇಕು ಎಂದು ಚನ್ನರಾಜ ಹಟ್ಟಿಹೊಳಿ ಹೇಳಿದರು. ಈ ವೇಳೆ ಬೈಲಹೊಂಗಲ ಕ್ಷೇತ್ರದ ಶಾಸಕರಾದ ಮಹಾಂತೇಶ ಕೌಜಲಗಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂಗಪ್ಪ ಬ ಭದ್ರಶೆಟ್ಟಿ, ಉಪಾಧ್ಯಕ್ಷರಾದ ರೇಖಾ ಢವಳಿ, ಸರ್ವ ಸದಸ್ಯರು, ರಾಮನಗೌಡ ಪಾಟೀಲ, ಸಿ.ಕೆ.ಮೆಕ್ಕೆದ್, ಅಶೋಕ್ ಭದ್ರಶೆಟ್ಟಿ, ಈರಣ್ಣ ಅಂಗಡಿ, ಗಜಾನಂದ ಸುತಗಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 