ಯುವ ಸಂಶೋಧಕರಿಗೆ ಮಾರ್ಗದರ್ಶಿ ದೀಪ ಇತಿಹಾಸ ಅಕಾಡೆಮಿ
Deepa Itisah Academy, a guide for young researchers
ಗದಗ 13: ಕಳೆದ 39 ವರ್ಷಗಳಿಂದ ನಿರಂತರವಾಗಿ ಕರ್ನಾಟಕ ಇತಿಹಾಸ ಸಂಶೋಧಕರ ಸಮ್ಮೇಳನಗಳು, ಐತಿಹಾಸಿಕ ಪರಂಪರೆ ಉಳಿಸಿ ಕಾರ್ಯಕ್ರಮಗಳು ಮತ್ತು ಇತಿಹಾಸ ದರ್ಶನದಂತಹ ಮಹತ್ವದ ಸಂಪುಟಗಳ ಪ್ರಕಟಣೆಯ ಮೂಲಕ ಕರ್ನಾಟಕ ಇತಿಹಾಸ ಅಕಾಡೆಮಿಯು ಯುವ ಇತಿಹಾಸ ಸಂಶೋಧಕರಿಗೆ ಮಾರ್ಗದರ್ಶಿ ದೀಪವಾಗಿದೆ ಎಂದು ಹಿರಿಯ ಇತಿಹಾಸ ಸಂಶೋಧಕರಾದ ಡಾ. ಲಕ್ಷ್ಮಣ ತೆಲಗಾವಿ ಹೇಳಿದರು.
ಅವರು ಗದುಗಿನ ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ವಿಶ್ವವಿದ್ಯಾಲಯದಲ್ಲಿ ಕರ್ನಾಟಕ ಇತಿಹಾಸ ಅಕಾಡೆಮಿ, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯ ಇವುಗಳ ಅಶ್ರಯದಲ್ಲಿ ಇತಿಹಾಸ ಅಕಾಡೆಮಿಯ ರಾಷ್ಟ್ರೀಯ ವಾರ್ಷಿಕ ಸಮ್ಮೇಳನದಲ್ಲಿ ಜರುಗಿದ ಸಮಾರೋಪ ಸಮಾರಂಭದಲ್ಲಿ ಸಮಾರೋಪ ನುಡಿಗಳನ್ನಾಡಿದರು.
ಕರ್ನಾಟಕ ಇತಿಹಾಸ ಅಕಾಡೆಮಿಯು ಹಿರಿಯ ಇತಿಹಾಸ ತಜ್ಞರಾದ ಡಾ. ಸೂರ್ಯನಾಥ ಕಾಮತರಿಂದ ಸ್ಥಾಪನೆಗೊಂಡು ವಿವಿಧ ಇತಿಹಾಸ ಸಂಶೋಧಕರಿಗೆ ವೇದಿಕೆಯಾಗಿ ಇದೀಗ ಡಾ. ದೇವರಕೊಂಡರೆಡ್ಡಿಯವರ ನೇತೃತ್ವದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಎಲ್ಲ ‘ಇಸಂ’ ಗಳಿಂದ ದೂರವಾಗಿ ವಸ್ತುನಿಷ್ಠ ಇತಿಹಾಸಕ್ಕೆ ಪೂರಕವಾಗಿ ಆಕರಗಳನ್ನು ಸೃಷ್ಟಿಸುವ ಮಹತ್ವಪೂರ್ಣ ಸಂಘಟನೆಯಾಗಿದೆ. ಇದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯುವ ಸಂಶೋಧಕರ ಮೇಲಿದೆ ಎಂದು ಹೇಳಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಪರಮಶಿವಮೂರ್ತಿ ಮಾತನಾಡಿ ಇತಿಹಾಸ ಅಕಾಡೆಮಿಯು ಪ್ರತಿವರ್ಷ ನೂರಾರು ಹೊಸ ಶಾಸನಗಳ ಸಂಶೋಧನೆ, ದೇವಾಲಯ, ಮೂರ್ತಿ ಶಿಲ್ಪಗಳ ವಿಶ್ಲೇಷಣೆೆ, ಪ್ರಾಚ್ಯವಸ್ತು ಸಂರಕ್ಷಣೆಯ ಮಹತ್ತರ ಕಾರ್ಯವನ್ನು ಮಾಡುತ್ತಾ ಬಂದಿದ್ದು, ಹೆಚ್ಚು ಹೆಚ್ಚು ಜನರು ಇದರ ಸದಸ್ಯರಾಗುವುದರ ಮೂಲಕ ನಮ್ಮ ನಾಡಿನ ಇತಿಹಾಸ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕಾಗಿದೆ ಎಂದು ಹೇಳಿದರು.
ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಡಾ. ಶರಣು ಗೋಗೇರಿ ಮಾತನಾಡಿ ಪ್ರವಾಸೋದ್ಯಮ ಸಚಿವರಾದ ಎಚ್. ಕೆ. ಪಾಟೀಲರ ನೇತೃತ್ವದಲ್ಲಿ ಲಕ್ಕುಂಡಿ ಪ್ರಾಧಿಕಾರ ಅನೇಕ ಮಹತ್ವದ ಕಾರ್ಯಗಳನ್ನು ಕೈಗೊಳ್ಳುತ್ತಾ ಬಂದಿದೆ. ಈಗಾಗಲೇ ಲಕ್ಕುಂಡಿ ಪರಿಸರದ 13 ದೇವಸ್ಥಾನಗಳ ಪುನರುತ್ಥಾನ ಕೈಗೊಂಡಿದ್ದು, ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು ಲಕ್ಕುಂಡಿ ಉತ್ಖನಕ್ಕೆ ಚಾಲನೆ ನೀಡಿದ್ದಾರೆ. ಕಳೆದ ವರ್ಷ ಲಕ್ಕುಂಡಿ ಪರಿಸರದ ಪ್ರಾಚ್ಯ ವಸ್ತುಗಳ ಅನ್ವೇಷಣಾ ಹಾಗೂ ಸಂರಕ್ಷಣಾ ಕಾರ್ಯವನ್ನು ಕೈಗೊಂಡಿದ್ದು ನಾಲ್ಕು ಏಕರೆ ಬಯಲು ಜಾಗೆಯಲ್ಲಿ ವಿಶಿಷ್ಟ ವಸ್ತು ಸಂಗ್ರಹಾಲಯವನ್ನು ನಿರ್ಮಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಲಕ್ಕುಂಡಿ ಪರಿಸರ ಅಭಿವೃದ್ಧಿಗೆ ಇತಿಹಾಸ ಸಂಶೋಧಕರು ತಮ್ಮ ಅಮೂಲ್ಯ ಸಲಹೆ ಸೂಚನೆಗಳನ್ನು ನೀಡಬೇಕೆಂದು ಹೇಳಿದರು. ಕರ್ನಾಟಕ ಇತಿಹಾಸ ಅಕಾಡೆಮಿಯ ಅಧ್ಯಕ್ಷರಾದ ಡಾ. ದೇವರಕೊಂಡಾರೆಡ್ಡಿ ಸಮ್ಮೇಳನ ಆಯೋಜನೆಗೆ ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು.
ಸಮಾರಂಭದಲ್ಲಿ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದ ಸಹಾಯಕ ನಿರ್ದೇಶಕರಾದ ಡಾ. ಅಬ್ದುಲ್ ಅಜೀಜ್ ಮುಲ್ಲಾ ಸರ್ವರನ್ನು ಸ್ವಾಗತಿಸಿದರು. ಪ್ರೊ. ಶಕುಂತಲಾ ಸಿಂಧೂರ ನಿರೂಪಿಸಿದರು. ಅಕಾಡೆಮಿಯ ಪ್ರಧಾನ ಕಾರ್ಯದರ್ಶಿ ಡಾ. ಕೆ. ಎಲ್. ರಾಜಶೇಖರ ವಂದಿಸಿದರು. ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ ಇತಿಹಾಸ ಸಂಶೋಧಕರು, ಉಪನ್ಯಾಸಕರು ಪಾಲ್ಗೊಂಡಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 