ಕೇಂದ್ರ ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ಗೆ ಕೊರೊನಾ ಸೋಂಕು
ನವದೆಹಲಿ, ಜೂನ್ ೪, ಕೇಂದ್ರ ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಅಜಯ್ ಕುಮಾರ್ ಅವರಿಗೆ ನಡೆಸಲಾದ ಪರೀಕ್ಷೆಯಲ್ಲಿ ಕೊರೊನಾ ಪಾಸಿಟಿವ್ ಇರುವುದು ಕಂಡು ಬಂದ ನಂತರ ಅವರನ್ನು ಹೋಂ ಕ್ವಾರಂಟೈನ್ ಒಳಪಡಿಸಲಾಗಿದೆ.ನಂತರ ದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವಾಲಯದ ಮುಖ್ಯ ಕಾರ್ಯಾಲಯವಾಗಿರುವ ರೈಸಿನಾ ಹಿಲ್ಸ್ ನ ಸೌತ್ ಬ್ಲಾಕ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ೩೫ ಮಂದಿ ಉದ್ಯೋಗಿಗಳನ್ನು ಸಹ ಮುನ್ನೆಚ್ಚರಿಕೆ ಕ್ರಮವಾಗಿ ಹೋಂ ಕ್ವಾರಂಟೈನ್ ಒಳಪಡಿಸಲಾಗಿದೆ.
ರಕ್ಷಣಾ ಸಚಿವಾಲಯ ಕಾರ್ಯದರ್ಶಿ ಗೆ ಕೊರೊನಾ ಸೋಂಕು ಕಂಡುಬಂದ ಹಿನ್ನಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮುನ್ನೆಚ್ಚರಿಕೆ ಕ್ರಮವಾಗಿ ಬುಧವಾರ ತಮ್ಮ ಕಚೇರಿಗೆ ಹಾಜರಾಗಲಿಲ್ಲಸೌತ್ ಬ್ಲಾಕ್ ನಲ್ಲಿ ಕೇಂದ್ರ ರಕ್ಷಣಾ ಸಚಿವರು, ರಕ್ಷಣಾ ಕಾರ್ಯದರ್ಶಿ, ಸೇನಾ ಮುಖ್ಯಸ್ಥರು, ನೌಕಾಪಡೆ ಮುಖ್ಯಸ್ಥರ ಕಚೇರಿಗಳು ಮೊದಲ ಅಂತಸ್ತಿನಲ್ಲಿವೆ. ರಕ್ಷಣಾ ಕಾರ್ಯದರ್ಶಿ ಕಚೇರಿಯನ್ನು ಸ್ಯಾನಿಟೈಜ್ ಗೊಳಿಸಿ ಉದ್ಯೋಗಿಗಳನ್ನು ಹೋಂ ಕ್ವಾರಂಟೈನ ಕಳುಹಿಸಲಾಗಿದೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 