ಅರಣ್ಯ ನಾಶದ ಕಾರಣದಿಂದ ಹವಾಮಾನದ ವೈಪರೀತ್ಯಗಳು ಉಂಟಾಗಿ ಕೃಷಿ ವಲಯದ ಮೇಲೆ ದುಷ್ಪರಿಣಾಮ ಬೀರುತ್ತವೆ
Deforestation causes extreme weather events that adversely affect the agricultural sector
ಅರಣ್ಯ ನಾಶದ ಕಾರಣದಿಂದ ಹವಾಮಾನದ ವೈಪರೀತ್ಯಗಳು ಉಂಟಾಗಿ ಕೃಷಿ ವಲಯದ ಮೇಲೆ ದುಷ್ಪರಿಣಾಮ ಬೀರುತ್ತವೆ
ರಾಣಿಬೆನ್ನೂರ 26: ಅರಣ್ಯ ಉಳಿಸಲು ಮತ್ತೊಮ್ಮೆ 70 ರ ದಶಕದ ಚಿಪ್ಕೋ ಚಳುವಳಿ ನಡೆಯಬೇಕು, ಅರಣ್ಯ ನಾಶದ ಕಾರಣದಿಂದ ಹವಾಮಾನದ ವೈಪರೀತ್ಯಗಳು ಉಂಟಾಗಿ ಕೃಷಿ ವಲಯದ ಮೇಲೆ ದುಷ್ಪರಿಣಾಮ ಬೀರುತ್ತವೆ ಎಂದು ಪ್ರಾಧ್ಯಾಪಕ ಪ್ರೊ. ಬಿ.ಯು ಮಾಳೇನಹಳ್ಳಿ ಹೇಳಿದರು.
ಇಲ್ಲಿನ ಹಲಗೇರಿ ರಸ್ತೆಯ ಬಿಎಜೆಎಸ್ಎಸ್ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಭೂಗೋಳಶಾಸ್ತ್ರ ವಿಭಾಗದ ವತಿಯಿಂದ ವಿಶ್ವ ಅರಣ್ಯ ದಿನ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದವರು, ಇದಲ್ಲದೇ ಈ ವರ್ಷದ ಎನ್.ಎಸ್.ಎಸ್. ವಾರ್ಷಿಕ ಶಿಬಿರ ನಡೆಯುವ ಗ್ರಾಮದಲ್ಲಿ 100 ಸಸಿ ನೆಡುವ ಮೂಲಕ ಮರ ಬೆಳೆಸುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪ್ರಾಚಾರ್ಯ ಡಾ. ಸುರೇಶ ಬಣಕಾರ ಅಧ್ಯಕ್ಷತೆ ವಹಿಸಿದ್ದರು. ಡಾ. ಪುಷ್ಪಾಂಜಲಿ ಕಾಂಬಳೆ, ಚೈತ್ರಾ ಕಮ್ಮಾರ, ನಂದಾ ಹಲಗೇರಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 