ಕರಗಿನಕೊಪ್ಪ ಗ್ರಾಮದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಸಮೀಪ ಬಸ್ಸ್ ನಿಲುಗಡೆಗೆ ಆಗ್ರಹ
Demand for a bus stop near the Government Polytechnic College in Karaginakoppa village
ಕರಗಿನಕೊಪ್ಪ ಗ್ರಾಮದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಸಮೀಪ ಬಸ್ಸ್ ನಿಲುಗಡೆಗೆ ಆಗ್ರಹ
ಮುಂಡಗೋಡ 05: ತಾಲೂಕಿನ ಕರಗಿನಕೊಪ್ಪ ಗ್ರಾಮದ ಹತ್ತಿರ ಇರುವ ಸರಕಾರಿ ಪಾಲಿಟೆಕ್ನಿಕ್ ಕಾಲೇಜ ಹತ್ತಿರ ಬಸ್ಸುಗಳನ್ನು ನಿಲುಗಡೆ ಮಾಡುವಂತೆ ನೂರಾರು ವಿದ್ಯಾರ್ಥಿಗಳೊಂದಿಗೆ ಸೋಮವಾರ ಬೆಳಗ್ಗೆ ಪ್ರತಿಭಟನೆ ಹಮ್ಮಿಕೊಂಡು ಮನವಿ ಸಲ್ಲಿಸಿದರು.
ತಾಲೂಕಿನ ಕರಗಿನಕೊಪ್ಪ ಗ್ರಾಮದ ಬಳಿ ಮುಂಡಗೋಡ ಹಾನಗಲ್ ಶಿರಸಿ-ಹುಬ್ಬಳ್ಳಿ ಮಾರ್ಗದ ಬಸ್ಗಳನ್ನು ನಿಲುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿ ನೂರಾರು ವಿದ್ಯಾರ್ಥಿಗಳು ಜತೆಗೂಡಿ ಪೊಲೀಸ ಠಾಣೆಗೆ ಬಂದು ಸಿಪಿಐ ರಂಗನಾಥ ನಿಲಮ್ಮನವರಿಗೆ ಭೇಟಿಯಾಗಿ ಬಸ್ ನಿಲುಗಡೆಯ ಕುರಿತು ನಾವು ಹಲವಾರು ಬಾರಿ ಮನವಿ ಅರ್ಿಸಿದ್ದೇವೆ ಆದರೂ ಸಹಿತ ಬಸ್ಗಳು ನಿಲುಗಡೆ ಮಾಡದೇ ಇರುವುದರಿಂದ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಕಾಲೇಜಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಹಾಗೂ ಸಮಯಕ್ಕೆ ಸರಿಯಾಗಿ ಮನೆಗೆ ತೆರಳಲು ಸಾಧ್ಯವಾಗುತ್ತಿಲ್ಲ.ಹೀಗೆ ಮುಂದುವರೆದರೆ ನಾವು ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲಾ ತಿಳಿಸಿದ್ದಾರೆ.
ಸಿಪಿಐ ರಂಗನಾಥ್ ನಿಲಮ್ಮನವರ ಸಾರಿಗೆ ಅಧಿಕಾರಿಗಳನ್ನು ಪೋಲಿಸ್ ಠಾಣೆಗೆ ಕರೆಸಿ ಬಸ್ ಸಮಸ್ಯೆ ಕುರಿತು ಚರ್ಚಿಸಿ ಬಸ್ಗಳು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ಹತ್ತಿರ ನಿಲುಗಡೆ ಮಾಡುವಂತೆ ತಿಳಿಸಿದ್ದಾರೆ.ಈ ವೇಳೆಯಲ್ಲಿ ಸಿಪಿಐ ರಂಗನಾಥ್ ನಿಲಮ್ಮನವರ ಪಿಎಸ್ಐ ಪರಶುರಾಮ ಮಿರ್ಜಿಗಿ ಹಾಗೂ ಕಾಲೇಜು ವಿದ್ಯಾರ್ಥಿಗಳು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 