ಸಂಗೊಳ್ಳಿ ರಾಯಣ್ಣ ವೃತ್ತ ಸ್ಥಾಪನೆಗೆ ಆಗ್ರಹ
Demand for establishment of Sangolli Rayanna circle
ಸಂಗೊಳ್ಳಿ ರಾಯಣ್ಣ ವೃತ್ತ ಸ್ಥಾಪನೆಗೆ ಆಗ್ರಹ
ಕಂಪ್ಲಿ 12: ಪಟ್ಟಣದ ಪುರಸಭೆ ಕಛೇರಿಯಲ್ಲಿ ನೂತನ ಅಧ್ಯಕ್ಷ ಭಟ್ಟ ಪ್ರಸಾದ್ ಇವರಿಗೆ ತಾಲೂಕು ಹಾಲುಮತ ಸಮಾಜದಿಂದ ಸನ್ಮಾನಿಸಿ ಗೌರವಿಸಲಾಯಿತು. ಹಾಲುಮತ ಸಮಾಜದ ಖಜಾಂಚಿ ಬಿ.ಶೇಖರ ಮಾತನಾಡಿ, ಕಂಪ್ಲಿ ಪಟ್ಟಣದ ಅಭಿವೃದ್ಧಿಗೆ ಹಾಲುಮತ ಸಮಾಜವು ಸಂಪೂರ್ಣವಾಗಿ ಕೈಜೋಡಿಸಲಾಗುತ್ತದೆ. ಇಲ್ಲಿನ 5ನೇ ವಾರ್ಡಿನ ಭೀರಲಿಂಗೇಶ್ವರ ದೇವಸ್ಥಾನದಲ್ಲಿರುವ ಕಾಲೋನಿಗೆ ಭೀರಲಿಂಗೇಶ್ವರ ನಗರವೆಂದು ನಾಮಕರಣ ಮಾಡಬೇಕು. ಮತ್ತು ಸಮಾಜಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಸಮಾಜವು ಆರ್ಥಿಕ, ಶೈಕ್ಷಣಿಕ. ಸಾಮಾಜಿಕವಾಗಿ ಹಿಂದುಳಿದಿದ್ದು, ಸೌಲಭ್ಯಗಳನ್ನು ಕಲ್ಪಿಸಿದ್ದಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯ. ಹಳೆ ಬಸ್ ನಿಲ್ದಾಣ ಬಳಿಯ ಕುರುಗೋಡ್ ರಸ್ತೆ ಬಳಿಯಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತ ನಿರ್ಮಿಸಿ, ಮೂರ್ತಿ ಸ್ಥಾಪಿಸಬೇಕು ಎಂದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಕುರಿಸಿದ್ದಪ್ಪ, ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ, ಶಿಕ್ಷಕ ಭೀರಲಿಂಗಪ್ಪ, ಮುಖಂಡರಾದ ಕುರಿ ಹುಸೇನಪ್ಪ, ಕೆ.ಯಮನೂರ್ಪ, ಕುರಿ ಮಂಜುನಾಥ, ಮೂಲೆಮನೆ ಮಂಜುನಾಥ, ಬಿಂಗಿ ಸೀನಪ್ಪ, ಷಣ್ಮುಕಪ್ಪ ಸೇರಿದಂತೆ ಇತರರು ಇದ್ದರು. ಫೆ.001: ಪಟ್ಟಣದ ಪುರಸಭೆ ಕಛೇರಿಯಲ್ಲಿ ನೂತನ ಅಧ್ಯಕ್ಷ ಭಟ್ಟ ಪ್ರಸಾದ್ ಇವರಿಗೆ ತಾಲೂಕು ಹಾಲುಮತ ಸಮಾಜದಿಂದ ಸನ್ಮಾನಿಸಿ ಗೌರವಿಸಲಾಯಿತು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 