ಮೈಲಾರ ಶುಗರ್ಸ ಕಾರ್ಖಾನೆಯಿಂದ ರೈತರಿಗೆ ಕಬ್ಬಿನ ಹಣ ನೀಡಬೇಕೆಂದು ಒತ್ತಾಯ
Demand for payment of sugarcane money to farmers from Mylar Sugar Factory
ಹೊಸಪೇಟೆ 25: ಸುತ್ತಮುತ್ತ ಗ್ರಾಮಗಳ ರೈತರು ಮೈಲಾರ್ ಶುಗರ್ಸ ಬೀರಬ್ಬಿ, ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಿರುತ್ತೇವೆ. ನವೆಂಬರ್ 30 ರಿಂದ ಇದುವರೆಗೂ ಒಂದು ರೂಪಾಯಿ ಹಣವನ್ನು ಕಾರ್ಖಾನೆಯವರು ರೈತರಿಗೆ ಪಾವತಿ ಮಾಡುತ್ತಿಲ್ಲ.ಆದರೆ ಮುಂಡರಗಿ, ಸಿರಗುಪ್ಪ, ಇನ್ನುಳಿದ ಸಕ್ಕರೆ ಕಾರ್ಖಾನೆಗಳು ಈಗಾಗಲೆ ಸಂಪೂರ್ಣ ಹಣವನ್ನು ರೈತರಿಗೆ ಪಾವತಿ ಮಾಡಿರುತ್ತಾರೆ. ಆದರೆ ಮೈಲಾರ್ ಶುಗರ್ಸ ಕಾರ್ಖಾನೆಯವರು ಮಾತ್ರ ಇದುವರೆಗು ಅಂದರೆ ಸುಮಾರು 4-ತಿಂಗಳವರೆಗೆ ಹಣವನ್ನು ನೀಡಿರುವುದಿಲ್ಲ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೂ ಆಡಳಿತ ಮಂಡಳಿಯವರಿಗೂ ಪೋನ್ ಮೂಲಕ ವಿಚಾರಿಸಿದರೆ ಅವರು ನಾವು ರೈತರಿಗೆ ಪೇಮೆಂಟ್ ಮಾಡುತ್ತೇವೆ, ಸರ್ಕಾರದಿಂದ ಇಥೆನಲ್ ಪೇಮೆಂಟ್ ಆಗಿರುವುದಿಲ್ಲ ಎಂಬ ಉಡಾಫೆ ಉತ್ತರವನ್ನು ನೀಡುತ್ತಿದ್ದಾರೆ. ಸ್ಥಳಿಯ ರೈತರು ಸುಮಾರು ರೂ.2ಅ ರಂತೆ ಬಡ್ಡಿತಂದು ಸಣ್ಣ ಮತ್ತುಅತೀ ಸಣ್ಣರೈತರು ಉಳುಮೆ ಮಾಡಿಕಬ್ಬು ಬೆಳೆದ ರೈತರಿಗೆಆಗುವಂತಹ ನಷ್ಟವನ್ನು ಕಾರ್ಖಾನೆಯವರೇ ಭರಿಸಬೇಕು. ಇಲ್ಲವಾದಲ್ಲಿಅವರ ಮೈಲಾರ್ ಶುಗರ್ಸ ಪರವಾನಿಗೆಯನ್ನು ರದ್ದು ಮಾಡಬೇಕು ಎಂದು ಈ ಮೂಲಕ ಕೋರುತ್ತೇವೆ. ಆದ್ದರಿಂದರೈತರಿಗೆ ತುಂಬಾಕಷ್ಟವಾಗಿದ್ದು, ಮುಂದಿನ ಬೆಳೆಗಳಿಗೆ ಗೊಬ್ಬರ, ಓಷಧಿಗಳನ್ನು ಕೊಡಲು ತುಂಬಾ ತೊಂದರೆಯಾಗಿರುತ್ತದೆ. ಜಿಲ್ಲಾಧಿಕಾರಿಗಳು ಆದಷ್ಟು ಬೇಗನೆ ಕಾರ್ಖಾನೆಯ ಮಾಲೀಕರನ್ನು ಕರೆಯಿಸಿ ವಿಚಾರಿಸಿ ರೈತರಿಗೆ ನೀಡಬೇಕಾಗಿರುವ ಕಬ್ಬಿನ ಹಣವನ್ನುಕೂಡಲೇಕೊಡಿಸಬೇಕೆಂದು ಕರ್ನಾಟಕ ರಾಜ್ಯರೈತ ಸಂಘ ಹಾಗೂ ಹಸಿರು ಸೇನೆ ಒತ್ತಾಯ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 