ವಿಧಾನ ಸಭೆಯಲ್ಲಿ ಪ್ರತಿಧ್ವನಿಸಿದ ಪ್ರತೇಕ ಮೈಲಾರ ಅಭಿವೃದ್ಧಿ ಪ್ರಾಧಿಕಾರಕ್ಕೆ ಒತ್ತಾಯ
Demand for separate Mylar Development Authority echoed in the Legislative Assembly
ಲೋಕದರ್ಶನ ವರದಿ
ಹೂವಿನಹಡಗಲಿ 12: ರಾಜ್ಯ ಸರ್ಕಾರ ಈ ಹಿಂದೆ ಘೋಷಿಸಿರುವ ಮೈಲಾರ ದೇವರಗುಡ್ಡ ಜಂಟಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಕಾನೂನು ತೊಡಕುಗಳು ಅಡ್ಡಿಯಾಗಿವೆ. ದೇವರಗುಡ್ಡ ಕೈಬಿಟ್ಟು ಪ್ರತ್ಯೇಕ ಮೈಲಾರ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕು’ ಎಂದು ಶಾಸಕ ಎಲ್.ಕೃಷ್ಣನಾಯ್ಕ ಒತ್ತಾಯಿಸಿದ್ದಾರೆ.ಕೃಷ್ಣನಾಯ್ಕ,’ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಅವರು ಈ ವಿಷಯ ಪ್ರಸ್ತಾಪಿಸಿದ್ದಾರೆ. ಅಂತರ್ ಜಿಲ್ಲೆಯ ದೇವರಗುಡ್ಡ ಸೇರೆ್ಡಯಿಂದ ಪ್ರಾಧಿಕಾರ ರಚನೆಗೆ ಅಡ್ಡಿಯಾಗಿದೆ. ವಂಶಪಾರಂಪರ್ಯ ಧರ್ಮಕರ್ತರ ಹಕ್ಕು ಮೊಟಕುಗೊಳಿಸದಂತೆ ಪ್ರಾಧಿಕಾರ ರಚಿಸುವುದು ಅಗತ್ಯವಿದೆ. ವಾರ್ಷಿಕ ಜಾತ್ರೆಯಲ್ಲಿ 8-10 ಲಕ್ಷ ಜನರು ಪಾಲ್ಗೊಳ್ಳುತ್ತಾರೆ. ಕ್ಷೇತ್ರದಲ್ಲಿ ಮೂಲಸೌಕರ್ಯಗಳ ಕೊರತೆ ಇದೆ. ಉತ್ತಮ ರಸ್ತೆಗಳಿಲ್ಲ, ವಾಹನ ಪಾರ್ಕಿಂಗ್ ಗೆ ಜಾಗ ಇಲ್ಲ, ಸ್ನಾನ ಘಟ್ಟ ಇಲ್ಲ, ಹರಕೆ ತೀರಿಸುವ ಭಕ್ತರಿಗೆ ಸೌಕರ್ಯಗಳಿಲ್ಲ’ ಎಂದು ಸದನದ ಗಮನ ಸೆಳೆದರು.ಮುಜರಾಯಿ ಸಚಿವ ರಾಮಲಿಂಗರೆಡ್ಡಿ ಉತ್ತರಿಸಿ, ಪ್ರಾಧಿಕಾರ ರಚನೆಗೆ ಸರ್ಕಾರಿ ಆದೇಶವಾಗಿದೆ. ಸದನದ ಬಳಿಕ ಕ್ಷೇತ್ರಕ್ಕೆ ಭೇಟಿ ನೀಡಿ ಅಲ್ಲಿನ ಅಭಿವೃದ್ಧಿಯ ಕುರಿತು ಗಮನಹರಿಸುವೆ’ ಎಂದು ಹೇಳಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 