ಗದಗ- ಹರಪನಹಳ್ಳಿ ರೈಲ್ವೆ ಮಾರ್ಗ ನಿರ್ಮಿಸಲು ಆಗ್ರಹ
Demand to build Gadag-Harapanahalli railway line
ಹೂವಿನಹಡಗಲಿ 05: ಗದಗ-ಹರಪನಹಳ್ಳಿ ನೂತನ ರೈಲ್ವೆ ಮಾರ್ಗದ ಸಮೀಕ್ಷೆ ಯನ್ನು ಅನುಷ್ಠಾನಗೊಳಿಸಲು ಆಗ್ರಹಿಸಿ ಹೂವಿನಹಡಗಲಿ ಹೋರಾಟ ವೇದಿಕೆಯಿಂದ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರಿಗೆ ಭಾನುವಾರ ಜಿಂದಾಲ್ ನಲ್ಲಿ ಮನವಿ ಸಲ್ಲಿಸಿದರು.ಈ ವೇಳೆ ಮಾತನಾಡಿದ ವೇದಿಕೆಯ ಸಂಚಾಲಕ ಎಸ್.ಎಸ್ ಪಾಟೀಲ್ , ’2014ರ ರೈಲ್ವೆ ಮುಂಗಡ ಪತ್ರದಲ್ಲಿ ಗದಗ-ಹರಪನಹಳ್ಳಿ ರೈಲ್ವೆ ಮಾರ್ಗ ಪರಿಷ್ಕೃತ ಪಟ್ಟಿಯಲ್ಲಿ ಮಂಜೂರಾಗಿ 11ವರ್ಷಗಳು ಕಳೆದಿವೆ ಆದರೆ ಅನುಷ್ಠಾನ ಆಗುತ್ತಿಲ್ಲ ಎಂದರು. ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ ಮಾತನಾಡಿ ಹರಪನಹಳ್ಳಿ ಮತ್ತು ಗದಗ ರೈಲ್ವೆ ಮಾರ್ಗವು ನಮ್ಮ. ತಂದೆ ಎಂ.ಪಿ.ಪ್ರಕಾಶ ಅವರ ಕನಸಾಗಿದ್ದು , ನೂತನ ರೈಲ್ವೆ ಮಾರ್ಗವು ಗದಗ- ಹರಪನಹಳ್ಳಿ ಸಂಪರ್ಕ ದಿಂದ ಬೆಂಗಳೂರು ಸಂಪರ್ಕ ಕಲ್ಪಿಸುತ್ತದೆ ಎಂದ ಅವರು ಕೂಡಲೇ ರೈಲ್ವೆ ಸಮೀಕ್ಷೆ ಮಾಡಲು ಕೈಗೊಳ್ಳಲು ಮನವಿ ಮಾಡಿದರು. ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಮಾತನಾಡಿ ಕೇಂದ್ರ ಸರ್ಕಾರ ರೈಲ್ವೆ ಯೋಜನೆಗಳನ್ನು ವಿಳಂಬ ಮಾಡದೇ ಅನುಷ್ಠಾನ ವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದಾರೆ ಎಂದ ಅವರು ಫೆಬ್ರವರಿ ತಿಂಗಳು ಅಧಿಕಾರ ಸಭೆಯಲ್ಲಿ ಚರ್ಚಿಸಿ,ಕೇಂದ್ರ ದ ಮುಂಬರುವ ಬಜೆಟ್ ನಲ್ಲಿ ಅನುಷ್ಠಾನ ಮಾಡುವುದಾಗಿ ಹೇಳಿದರು. ಇದೇ ವೇಳೆ ಪರ್ತಕರ್ತರಾದ ಎಸ್ .ಎಂ.ಬಸವರಾಜ, ಕೆ.ಅಯ್ಯನಗೌಡ, ಮಧುಸೂದನ್ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 