ರಬಕವಿ-ಮಹಿಷವಾಡಗಿ ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ
Demand to complete Rabakavi-Mahishwadagi bridge work
ರಬಕವಿ-ಬನಹಟ್ಟಿ 10: ಡಿಸೆಂಬರ್ ತಿಂಗಳಲ್ಲಿ ಐದು ದಿನಗಳ ಕಾಲ ಡಾ.ರವಿ ಜಮಖಂಡಿ ನೇತೃತ್ವದಲ್ಲಿ ನಡೆದ ಉಪವಾಸ ಸತ್ಯಾಗ್ರಹದ ವೇದಿಕೆಗೆ ಬಂದು ಮೂರು ದಿನಗಳಲ್ಲಿ ಕಾಮಗಾರಿ ನಡೆಸಿ ಪೂರ್ಣಗೊಳಿಸುವ ಭರವಸೆ ನೀಡಿ ತಂಪು ಪಾನೀಯ ಕುಡಿಸಿ ನಿರಶನಕ್ಕೆ ತೆರೆ ಎಳೆದಿದ್ದ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ತಿಂಗಳುಗಳು ಗತಿಸಿದರು ಇದೂವರೆಗೆ ಕಾಮಗಾರಿಗೆ ಚಾಲನೆ ನೀಡಿಲ್ಲ.
ಸದ್ಯ ಹಿಪ್ಪರಗಿ ಜಲಾಶಯದ 22ನೇ ಗೇಟ್ ಕಿತ್ತು ನದಿಪಾತ್ರ ಸಂಪೂರ್ಣ ಖಾಲಿಯಾಗಿ ಮೂಲ ಪಿಲ್ಲರ್ಗಳು ಕಣ್ಣಿಗೆ ರಾಚುತ್ತಿವೆ. ಕಾಮಗಾರಿ ನಡೆಸಲು ನದಿಯಲ್ಲಿನ ನೀರು ಖಾಲಿಯಾಗದ್ದನ್ನು ಕಾರಣ ನೀಡುತ್ತಿದ್ದ ಗುತ್ತಿಗೆದಾರ ಹಾಗೂ ಇಲಾಖೆ ಅಭಿಯಂತರರು ಇದೀಗ ನದಿಪಾತ್ರದ ಮೂಲ ಪಿಲ್ಲರ್ಗಳು ತೆರವಾಗಿರುವ ಸಮಯ ಬಳಸಿಕೊಂಡು ತಕ್ಷಣ ಕಾಮಗಾರಿ ನಡೆಸಿ ನದಿಯಲ್ಲಿನ ಪಿಲ್ಲರ್ಗಳನ್ನು ಅಳವಡಿಸಿ ಪೂರ್ಣಗೊಳಿಸಲು ಅವಕಾಶವಿದ್ದು, ತಕ್ಷಣ ಅಧಿಕಾರಿಗಳು ಹಾಗೂ ಗುತ್ತಿಗೆದಾರ ಕಾಮಗಾರಿ ತ್ವರಿತವಾಗಿ ಪ್ರಾರಂಭಿಸಬೇಕೆಂದು ಪ್ರಸನ್ನ ಹಜಾರೆ, ಸಂಜಯ ತೇಲಿ, ಸಂಜಯ ತೆಗ್ಗಿ, ಧರೆಪ್ಪ ಉಳ್ಳಾಗಡ್ಡಿ, ಶ್ರೀಶೈಲ ದಲಾಲ, ಬಸವರಾಜ ಗುಡೋಡಗಿ, ಯುನೂಸ್ ಚೌಗಲಾ ಮೊದಲಾದವರು ಆಗ್ರಹಿಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 