ರಬಕವಿ-ಮಹಿಷವಾಡಗಿ ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ
Demand to complete Rabakavi-Mahishwadagi bridge work
ರಬಕವಿ-ಬನಹಟ್ಟಿ 10: ಡಿಸೆಂಬರ್ ತಿಂಗಳಲ್ಲಿ ಐದು ದಿನಗಳ ಕಾಲ ಡಾ.ರವಿ ಜಮಖಂಡಿ ನೇತೃತ್ವದಲ್ಲಿ ನಡೆದ ಉಪವಾಸ ಸತ್ಯಾಗ್ರಹದ ವೇದಿಕೆಗೆ ಬಂದು ಮೂರು ದಿನಗಳಲ್ಲಿ ಕಾಮಗಾರಿ ನಡೆಸಿ ಪೂರ್ಣಗೊಳಿಸುವ ಭರವಸೆ ನೀಡಿ ತಂಪು ಪಾನೀಯ ಕುಡಿಸಿ ನಿರಶನಕ್ಕೆ ತೆರೆ ಎಳೆದಿದ್ದ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ತಿಂಗಳುಗಳು ಗತಿಸಿದರು ಇದೂವರೆಗೆ ಕಾಮಗಾರಿಗೆ ಚಾಲನೆ ನೀಡಿಲ್ಲ.
ಸದ್ಯ ಹಿಪ್ಪರಗಿ ಜಲಾಶಯದ 22ನೇ ಗೇಟ್ ಕಿತ್ತು ನದಿಪಾತ್ರ ಸಂಪೂರ್ಣ ಖಾಲಿಯಾಗಿ ಮೂಲ ಪಿಲ್ಲರ್ಗಳು ಕಣ್ಣಿಗೆ ರಾಚುತ್ತಿವೆ. ಕಾಮಗಾರಿ ನಡೆಸಲು ನದಿಯಲ್ಲಿನ ನೀರು ಖಾಲಿಯಾಗದ್ದನ್ನು ಕಾರಣ ನೀಡುತ್ತಿದ್ದ ಗುತ್ತಿಗೆದಾರ ಹಾಗೂ ಇಲಾಖೆ ಅಭಿಯಂತರರು ಇದೀಗ ನದಿಪಾತ್ರದ ಮೂಲ ಪಿಲ್ಲರ್ಗಳು ತೆರವಾಗಿರುವ ಸಮಯ ಬಳಸಿಕೊಂಡು ತಕ್ಷಣ ಕಾಮಗಾರಿ ನಡೆಸಿ ನದಿಯಲ್ಲಿನ ಪಿಲ್ಲರ್ಗಳನ್ನು ಅಳವಡಿಸಿ ಪೂರ್ಣಗೊಳಿಸಲು ಅವಕಾಶವಿದ್ದು, ತಕ್ಷಣ ಅಧಿಕಾರಿಗಳು ಹಾಗೂ ಗುತ್ತಿಗೆದಾರ ಕಾಮಗಾರಿ ತ್ವರಿತವಾಗಿ ಪ್ರಾರಂಭಿಸಬೇಕೆಂದು ಪ್ರಸನ್ನ ಹಜಾರೆ, ಸಂಜಯ ತೇಲಿ, ಸಂಜಯ ತೆಗ್ಗಿ, ಧರೆಪ್ಪ ಉಳ್ಳಾಗಡ್ಡಿ, ಶ್ರೀಶೈಲ ದಲಾಲ, ಬಸವರಾಜ ಗುಡೋಡಗಿ, ಯುನೂಸ್ ಚೌಗಲಾ ಮೊದಲಾದವರು ಆಗ್ರಹಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 