ಸರ್ವೆ ಕಚೇರಿಗೆ ಭೂ ದಾಖಲೆ ಉಪನಿರ್ದೇಶಕರ ಭೇಟಿ
Deputy Director of Land Records visits Survey Office
ಇಂಡಿ 19: ತಹಶೀಲ್ದಾರ್ ಕಚೇರಿಯ ಸರ್ವೆ ಕಚೇರಿಯಲ್ಲಿ ಸರ್ಕಾರಿ ಕಡತಗಳು ಹಾಗೂ ಪ್ರಮುಖ ದಾಖಲೆಗಳು ನಿರ್ಲಕ್ಷ್ಯಕ್ಕೆ ಒಳಗಾಗಿರುವ ಕುರಿತು ‘ಲೋಕದರ್ಶನ’ದಲ್ಲಿ ಪ್ರಕಟವಾದ ವರದಿಗೆ ಸ್ಪಂದಿಸಿದ ವಿಜಯಪುರ ಭೂ ದಾಖಲೆಗಳ ಉಪನಿರ್ದೇಶಕ ರವಿಕುಮಾರ್ ಸಾಗರ ಅವರು ಕಚೇರಿಗೆ ಭೇಟಿ ನೀಡಿ ಪರೀಶೀಲನೆ ನಡೆಸಿದರು. ಅಭಿಲೇಖಾಲಯಕ್ಕೆ ಭೇಟಿ ನೀಡಿ ದಾಖಲೆಗಳ ಸಂರಕ್ಷಣೆ ಹಾಗೂ ನಿರ್ವಹಣೆ ಕುರಿತು ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಬಳಿಕ ನಗರಮಾಪನ ಕಚೇರಿಗೂ ಭೇಟಿ ನೀಡಿ ಪರೀಶೀಲನೆ ನಡೆಸಿ, ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರವಿಕುಮಾರ್ ಸಾಗರ, ಪತ್ರಿಕೆಯಲ್ಲಿ ಪ್ರಕಟವಾದ ವರದಿಯ ಮಾಹಿತಿ ಆಧರಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 