ಉಗ್ರಾಣ ನಿಗಮ ಮಂಡಳಿ ಕೇಂದ್ರಕ್ಕೆ ಉಪ ಲೋಕಾಯುಕ್ತ ನ್ಯಾ. ಬಿ.ವೀರ್ಪ ಅನೀರೀಕ್ಷಿತ ಭೇಟಿ ಪರೀಶೀಲನೆ
Deputy Lokayukta for Warehousing Corporation Board Center. B. Veerpa Unexpected Visit Check
ಉಗ್ರಾಣ ನಿಗಮ ಮಂಡಳಿ ಕೇಂದ್ರಕ್ಕೆ ಉಪ ಲೋಕಾಯುಕ್ತ ನ್ಯಾ. ಬಿ.ವೀರ್ಪ ಅನೀರೀಕ್ಷಿತ ಭೇಟಿ ಪರೀಶೀಲನೆ
ಬಳ್ಳಾರಿ 17:ನಗರದ ಬಂಡಿಮೋಟ ಬಳಿಯ ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಮಂಡಳಿ ಘಟಕ-2 ಕೇಂದ್ರಕ್ಕೆ ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ವೀರ್ಪ ಅವರು ಶುಕ್ರವಾರ ಅನೀರೀಕ್ಷಿತ ಭೇಟಿ ನೀಡಿ ಆಹಾರ ಧಾನ್ಯಗಳನ್ನು ವೀಕ್ಷಿಸಿದರು.
ಉಗ್ರಾಣದಲ್ಲಿ ಸ್ವಚ್ಛತೆ ಹಾಗೂ ಸರಿಯಾದ ನಿರ್ವಹಣೆ ಮಾಡದೇ ಇರುವುದನ್ನು ಕಂಡು ಬೇಸರ ವ್ಯಕ್ತಪಡಿಸಿದರು. ಉಗ್ರಾಣದಲ್ಲಿ ಸುಮಾರು 48 ಸಾವಿರ ಜೋಳದ ಚೀಲಗಳು(24 ಸಾವಿರ ಕ್ವಿಂಟಾಲ್) ಹುಳ ತುಂಬಿಕೊಂಡು, ಪುಡಿಗಟ್ಟಿರುವುದನ್ನು ಕಂಡು ಅಚ್ಚರಿ ವ್ಯಕ್ತಪಡಿಸಿದ ಉಪಲೋಕಾಯುಕ್ತರು, ಅಧಿಕಾರಿಗಳ ಬೇಜವಾಬ್ದಾರಿತನದಿಂದ ಬಡಜನರು ಸೇವಿಸುವ ಆಹಾರವು ನಷ್ಟಗೊಳ್ಳುತ್ತಿರುವುದಕ್ಕೆ ಸ್ವಯಂ ಪ್ರಕರಣ ದಾಖಲಿಸಿಕೊಳ್ಳುತ್ತೇವೆ ಎಂದರು.
ಈ ಸಂದರ್ಭದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರಾದ ಕೆ.ಎಂ.ರಾಜಶೇಖರ್, ಸಹಾಯಕ ನಿಬಂಧಕರಾದ ಶುಭವೀರ್ ಜೈನ್.ಬಿ., ಉಪ ನಿಬಂಧಕರಾದ ಅರವಿಂದ.ಎನ್.ವಿ., ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದ ಪೊಲೀಸ್ ಅಧೀಕ್ಷಕ ಸಿದ್ಧರಾಜು.ಸಿ, ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಮಂಡಳಿ ಘಟಕ-2 ಕೇಂದ್ರದ ಅಧಿಕಾರಿ ಶರಾವತಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಸಕೀನಾ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ತಹಶೀಲ್ದಾರ ಗುರುರಾಜ ಸೇರಿದಂತೆ ಇತರರು ಇದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 