ಚಿಕ್ಕೋಡಿ ಜಿಲ್ಲೆಗಾಗಿ ಧರಣಿ ಸತ್ಯಾಗ್ರಹ
Dharani Satyagraha for Chikkodi district
ಚಿಕ್ಕೋಡಿ ಜಿಲ್ಲೆಗಾಗಿ ಧರಣಿ ಸತ್ಯಾಗ್ರಹ
ಮಾಂಜರಿ 15: ಪ್ರತ್ಯೇಕ ಚಿಕ್ಕೋಡಿ ಜಿಲ್ಲೆಗಾಗಿ ನಡೆದ ಧರಣಿ ಸತ್ಯಾಗ್ರಹ 7 ನೇ ದಿನಕ್ಕೆ ಕಾಲಿಟ್ಟಿದೆ, ಇನ್ನೂವರೆಗೆ ಯಾವೊಬ್ಬ ಜನಪ್ರತಿನಿಧಿಗಳೂ ಸಹ ವೇದಿಕೆ ಕಡೆಗೆ ಸುಳಿಯದೇ ಇರುವುದು ವಿಶಾದಕರ ಸಂಗತಿಯಾಗಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ, ಧರಣಿ ನಿರತರ ಆರೋಗ್ಯ ತಪಾಸಣೆ ಮಾಡಲಾಯಿತು. ಕೇರೂರ ಗ್ರಾಮದ ಯುವಕರು ಚಿಕ್ಕೋಡಿ ಜಿಲ್ಲೆಯ ಹೋರಾಟಕ್ಕೆ ಬೆಂಬಲಿಸಿ ಜಿಲ್ಲಾ ಹೋರಾಟಗಾರರಿಗೆ ಶಕ್ತಿ ತುಂಬಿದರು.
ಯುವ ಹೋರಾಟಗಾರ ಪ್ರತಾಪಸಿಂಹ ಪಾಟೀಲ ಮಾತನಾಡಿ ಚಿಕ್ಕೋಡಿ ಜಿಲ್ಲೆ ಆಗುವುದರಿಂದ, ಆಡಳಿತದಲ್ಲಿ ಸುಧಾರಣೆ ಆಗುತ್ತದೆ, ಉದ್ಯಮಗಳು ಸ್ಥಾಪನೆಗೊಳ್ಳುತ್ತವೆ, ಇದರಿಂದ ಯುವಕರಿಗೆ ಉದ್ಯೋಗಗಳು ಸಿಗಲಿವೆ, ದೂರದ ಬೆಳಗಾವಿಗೆ ಕೆಲಸ ಕಾರ್ಯಕ್ಕಾಗಿ ಅಲೆದಾಡುವುದು ತಪ್ಪಲಿದೆ ಎಂದು ಹೇಳಿದರು.ಸಿದ್ದು ಕಾಂಬಳೆ, ಯಾಶೀನ ಜಮಾದಾರ, ಕೇದಾರಿ ಹುಬ್ಬಳ್ಳಿ, ಚಂದ್ರಕಾಂತ ಹುಕ್ಕೇರಿ, ಸಂಜು ಬಡಿಗೇರ, ಅಪ್ಪಾಸಾಹೇಬ ಹಿರೆಕೋಡಿ, ಚಿದಾನಂದ ಶಿರೋಳೆ, ಅಮೂಲ ನಾವಿ, ವಿಜಯ ಬ್ಯಾಳೆ, ಮಾಳು ಕರೆಣ್ಣವರ, ಸಂತೋಷ ಪೂಜೇರಿ, ಪ್ರಮೋದ್ ಪಾಟೀಲ, ಸುರೇಶ ಜಿಡ್ಡಿಮನಿ, ಆನಂದ ಮಗದುಮ್ ಹಾಗೂ ಇತರ ಹೋರಾಟಗಾರರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 