ಚಿಕ್ಕೋಡಿ ಜಿಲ್ಲೆಗಾಗಿ ಧರಣಿ ಸತ್ಯಾಗ್ರಹ
Dharani Satyagraha for Chikkodi district
ಚಿಕ್ಕೋಡಿ ಜಿಲ್ಲೆಗಾಗಿ ಧರಣಿ ಸತ್ಯಾಗ್ರಹ
ಮಾಂಜರಿ 15: ಪ್ರತ್ಯೇಕ ಚಿಕ್ಕೋಡಿ ಜಿಲ್ಲೆಗಾಗಿ ನಡೆದ ಧರಣಿ ಸತ್ಯಾಗ್ರಹ 7 ನೇ ದಿನಕ್ಕೆ ಕಾಲಿಟ್ಟಿದೆ, ಇನ್ನೂವರೆಗೆ ಯಾವೊಬ್ಬ ಜನಪ್ರತಿನಿಧಿಗಳೂ ಸಹ ವೇದಿಕೆ ಕಡೆಗೆ ಸುಳಿಯದೇ ಇರುವುದು ವಿಶಾದಕರ ಸಂಗತಿಯಾಗಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ, ಧರಣಿ ನಿರತರ ಆರೋಗ್ಯ ತಪಾಸಣೆ ಮಾಡಲಾಯಿತು. ಕೇರೂರ ಗ್ರಾಮದ ಯುವಕರು ಚಿಕ್ಕೋಡಿ ಜಿಲ್ಲೆಯ ಹೋರಾಟಕ್ಕೆ ಬೆಂಬಲಿಸಿ ಜಿಲ್ಲಾ ಹೋರಾಟಗಾರರಿಗೆ ಶಕ್ತಿ ತುಂಬಿದರು.
ಯುವ ಹೋರಾಟಗಾರ ಪ್ರತಾಪಸಿಂಹ ಪಾಟೀಲ ಮಾತನಾಡಿ ಚಿಕ್ಕೋಡಿ ಜಿಲ್ಲೆ ಆಗುವುದರಿಂದ, ಆಡಳಿತದಲ್ಲಿ ಸುಧಾರಣೆ ಆಗುತ್ತದೆ, ಉದ್ಯಮಗಳು ಸ್ಥಾಪನೆಗೊಳ್ಳುತ್ತವೆ, ಇದರಿಂದ ಯುವಕರಿಗೆ ಉದ್ಯೋಗಗಳು ಸಿಗಲಿವೆ, ದೂರದ ಬೆಳಗಾವಿಗೆ ಕೆಲಸ ಕಾರ್ಯಕ್ಕಾಗಿ ಅಲೆದಾಡುವುದು ತಪ್ಪಲಿದೆ ಎಂದು ಹೇಳಿದರು.ಸಿದ್ದು ಕಾಂಬಳೆ, ಯಾಶೀನ ಜಮಾದಾರ, ಕೇದಾರಿ ಹುಬ್ಬಳ್ಳಿ, ಚಂದ್ರಕಾಂತ ಹುಕ್ಕೇರಿ, ಸಂಜು ಬಡಿಗೇರ, ಅಪ್ಪಾಸಾಹೇಬ ಹಿರೆಕೋಡಿ, ಚಿದಾನಂದ ಶಿರೋಳೆ, ಅಮೂಲ ನಾವಿ, ವಿಜಯ ಬ್ಯಾಳೆ, ಮಾಳು ಕರೆಣ್ಣವರ, ಸಂತೋಷ ಪೂಜೇರಿ, ಪ್ರಮೋದ್ ಪಾಟೀಲ, ಸುರೇಶ ಜಿಡ್ಡಿಮನಿ, ಆನಂದ ಮಗದುಮ್ ಹಾಗೂ ಇತರ ಹೋರಾಟಗಾರರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 