ಚಿಕ್ಕೋಡಿ ಜಿಲ್ಲೆಗಾಗಿ ಧರಣಿ ಸತ್ಯಾಗ್ರಹ
Dharani Satyagraha for Chikkodi district
ಚಿಕ್ಕೋಡಿ ಜಿಲ್ಲೆಗಾಗಿ ಧರಣಿ ಸತ್ಯಾಗ್ರಹ
ಮಾಂಜರಿ 15: ಪ್ರತ್ಯೇಕ ಚಿಕ್ಕೋಡಿ ಜಿಲ್ಲೆಗಾಗಿ ನಡೆದ ಧರಣಿ ಸತ್ಯಾಗ್ರಹ 7 ನೇ ದಿನಕ್ಕೆ ಕಾಲಿಟ್ಟಿದೆ, ಇನ್ನೂವರೆಗೆ ಯಾವೊಬ್ಬ ಜನಪ್ರತಿನಿಧಿಗಳೂ ಸಹ ವೇದಿಕೆ ಕಡೆಗೆ ಸುಳಿಯದೇ ಇರುವುದು ವಿಶಾದಕರ ಸಂಗತಿಯಾಗಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ, ಧರಣಿ ನಿರತರ ಆರೋಗ್ಯ ತಪಾಸಣೆ ಮಾಡಲಾಯಿತು. ಕೇರೂರ ಗ್ರಾಮದ ಯುವಕರು ಚಿಕ್ಕೋಡಿ ಜಿಲ್ಲೆಯ ಹೋರಾಟಕ್ಕೆ ಬೆಂಬಲಿಸಿ ಜಿಲ್ಲಾ ಹೋರಾಟಗಾರರಿಗೆ ಶಕ್ತಿ ತುಂಬಿದರು.
ಯುವ ಹೋರಾಟಗಾರ ಪ್ರತಾಪಸಿಂಹ ಪಾಟೀಲ ಮಾತನಾಡಿ ಚಿಕ್ಕೋಡಿ ಜಿಲ್ಲೆ ಆಗುವುದರಿಂದ, ಆಡಳಿತದಲ್ಲಿ ಸುಧಾರಣೆ ಆಗುತ್ತದೆ, ಉದ್ಯಮಗಳು ಸ್ಥಾಪನೆಗೊಳ್ಳುತ್ತವೆ, ಇದರಿಂದ ಯುವಕರಿಗೆ ಉದ್ಯೋಗಗಳು ಸಿಗಲಿವೆ, ದೂರದ ಬೆಳಗಾವಿಗೆ ಕೆಲಸ ಕಾರ್ಯಕ್ಕಾಗಿ ಅಲೆದಾಡುವುದು ತಪ್ಪಲಿದೆ ಎಂದು ಹೇಳಿದರು.ಸಿದ್ದು ಕಾಂಬಳೆ, ಯಾಶೀನ ಜಮಾದಾರ, ಕೇದಾರಿ ಹುಬ್ಬಳ್ಳಿ, ಚಂದ್ರಕಾಂತ ಹುಕ್ಕೇರಿ, ಸಂಜು ಬಡಿಗೇರ, ಅಪ್ಪಾಸಾಹೇಬ ಹಿರೆಕೋಡಿ, ಚಿದಾನಂದ ಶಿರೋಳೆ, ಅಮೂಲ ನಾವಿ, ವಿಜಯ ಬ್ಯಾಳೆ, ಮಾಳು ಕರೆಣ್ಣವರ, ಸಂತೋಷ ಪೂಜೇರಿ, ಪ್ರಮೋದ್ ಪಾಟೀಲ, ಸುರೇಶ ಜಿಡ್ಡಿಮನಿ, ಆನಂದ ಮಗದುಮ್ ಹಾಗೂ ಇತರ ಹೋರಾಟಗಾರರು ಉಪಸ್ಥಿತರಿದ್ದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 