ಧೋನಿ ಬ್ಯಾಟಿಂಗ್ ನಮಗೆಲ್ಲಾ ಭಯ ಹುಟ್ಟಿಸಿತ್ತು: ವಿರಾಟ್
ಬೆಂಗಳೂರು, ಏ 22 - ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ರೋಚಕ ಪಂದ್ಯದಲ್ಲಿ ಒಂದು ರನ್ನಿಂದ ಗೆದ್ದ ರಾಯಲ್ ಚಾಲೆಂಜೆರ್ಸ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ, ಧೋನಿ ಬ್ಯಾಟಿಂಗ್ ನಮಗೆಲ್ಲಾ ಭಯ ಹುಟ್ಟಿಸಿತ್ತು ಎಂದು ತಿಳಿಸಿದ್ದಾರೆ. 'ನಾವು 19ನೇ ಓವರ್ ವರೆಗೂ ಉತ್ತಮ ಬೌಲಿಂಗ್ ನಡೆಸಿದ್ದೇವೆ. ಈ ಪಿಚ್ ನಲ್ಲಿ 160 ರನ್ ಸಮರ್ಥಿಸಿ ಕೊಳ್ಳುವುದು. ಉತ್ತಮ ಕೆಲಸ. ಈ ಪಂದ್ಯ ಗೆದ್ದಿರುವುದು ಖುಷಿ ನೀಡಿದೆ. ಇದಕ್ಕೂ ಮೊದಲು ಎರಡು ಪಂದ್ಯಗಳನ್ನು ನಾವು ಕಡಿಮೆ ರನ್ ಗಳಿಂದ ಸೋತಿದ್ದೇವೆ' ಎಂದು ತಿಳಿಸಿದ್ದಾರೆ. 'ಧೋನಿ ಅವರು ತಮ್ಮ ಭರ್ಜರಿ ಬ್ಯಾಟಿಂಗ್ ನಿಂದ, ನನಗೆ ಹಾಗೂ ನನ್ನ ತಂಡವನ್ನು ಸೋಲಿಸಿದರು. ಮಾಹಿ ಅವರು ಯಾವುದಕ್ಕೆ ಖ್ಯಾತರೋ, ಅಂತಹ ಆಟ ಆಡಿದ್ದಾರೆ. ಅವರು ತಮ್ಮ ಧಮಾಕೆದಾರ್ ಪ್ರದರ್ಶನದಿಂದ ನಮ್ಮಗೆಲ್ಲ ಭಯ ಹುಟ್ಟಿಸಿದ್ದರು' ಎಂದು ಧೋನಿ ಬ್ಯಾಟಿಂಗ್ ನ್ನು ವಿರಾಟ್ ಹಾಡಿ ಹೊಗಳಿದ್ದಾರೆ. ಮೊದಲ ಆರು ಓವರ್ ಗಳಲ್ಲಿ ಚೆಂಡು ಬ್ಯಾಟ್ ಗೆ ಉತ್ತಮವಾಗಿ ಬರುತ್ತಿರಲಿಲ್ಲ. ಎಬಿಡಿ ಹಾಗೂ ಪಾರ್ಥಿವ ಅವರು ತಂಡವನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತುಕೊಂಡರು. ನಾವು 175 ರನ್ ಗಳ ಗುರಿ ಲೆಕ್ಕಾ ಹಾಕಿದ್ದೇವು. ಆದರೆ 15 ರನ್ ಗಳು ಕಡಿಮೆ ಆಯಿತು. ಬೌಲರ್ ಗಳು ಶ್ರೇಷ್ಠ ಪ್ರದರ್ಶನ ನೀಡಿದ್ದಾರೆ ಎಂದು ವಿರಾಟ್ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 