ಧೋನಿ ಬ್ಯಾಟಿಂಗ್ ನಮಗೆಲ್ಲಾ ಭಯ ಹುಟ್ಟಿಸಿತ್ತು: ವಿರಾಟ್
ಬೆಂಗಳೂರು, ಏ 22 - ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ರೋಚಕ ಪಂದ್ಯದಲ್ಲಿ ಒಂದು ರನ್ನಿಂದ ಗೆದ್ದ ರಾಯಲ್ ಚಾಲೆಂಜೆರ್ಸ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ, ಧೋನಿ ಬ್ಯಾಟಿಂಗ್ ನಮಗೆಲ್ಲಾ ಭಯ ಹುಟ್ಟಿಸಿತ್ತು ಎಂದು ತಿಳಿಸಿದ್ದಾರೆ. 'ನಾವು 19ನೇ ಓವರ್ ವರೆಗೂ ಉತ್ತಮ ಬೌಲಿಂಗ್ ನಡೆಸಿದ್ದೇವೆ. ಈ ಪಿಚ್ ನಲ್ಲಿ 160 ರನ್ ಸಮರ್ಥಿಸಿ ಕೊಳ್ಳುವುದು. ಉತ್ತಮ ಕೆಲಸ. ಈ ಪಂದ್ಯ ಗೆದ್ದಿರುವುದು ಖುಷಿ ನೀಡಿದೆ. ಇದಕ್ಕೂ ಮೊದಲು ಎರಡು ಪಂದ್ಯಗಳನ್ನು ನಾವು ಕಡಿಮೆ ರನ್ ಗಳಿಂದ ಸೋತಿದ್ದೇವೆ' ಎಂದು ತಿಳಿಸಿದ್ದಾರೆ. 'ಧೋನಿ ಅವರು ತಮ್ಮ ಭರ್ಜರಿ ಬ್ಯಾಟಿಂಗ್ ನಿಂದ, ನನಗೆ ಹಾಗೂ ನನ್ನ ತಂಡವನ್ನು ಸೋಲಿಸಿದರು. ಮಾಹಿ ಅವರು ಯಾವುದಕ್ಕೆ ಖ್ಯಾತರೋ, ಅಂತಹ ಆಟ ಆಡಿದ್ದಾರೆ. ಅವರು ತಮ್ಮ ಧಮಾಕೆದಾರ್ ಪ್ರದರ್ಶನದಿಂದ ನಮ್ಮಗೆಲ್ಲ ಭಯ ಹುಟ್ಟಿಸಿದ್ದರು' ಎಂದು ಧೋನಿ ಬ್ಯಾಟಿಂಗ್ ನ್ನು ವಿರಾಟ್ ಹಾಡಿ ಹೊಗಳಿದ್ದಾರೆ. ಮೊದಲ ಆರು ಓವರ್ ಗಳಲ್ಲಿ ಚೆಂಡು ಬ್ಯಾಟ್ ಗೆ ಉತ್ತಮವಾಗಿ ಬರುತ್ತಿರಲಿಲ್ಲ. ಎಬಿಡಿ ಹಾಗೂ ಪಾರ್ಥಿವ ಅವರು ತಂಡವನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತುಕೊಂಡರು. ನಾವು 175 ರನ್ ಗಳ ಗುರಿ ಲೆಕ್ಕಾ ಹಾಕಿದ್ದೇವು. ಆದರೆ 15 ರನ್ ಗಳು ಕಡಿಮೆ ಆಯಿತು. ಬೌಲರ್ ಗಳು ಶ್ರೇಷ್ಠ ಪ್ರದರ್ಶನ ನೀಡಿದ್ದಾರೆ ಎಂದು ವಿರಾಟ್ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 