ದೇವಿ ವಿಸರ್ಜನೆಯೊಂದಿಗೆ ದ್ಯಾಮವ್ವಾ ಜಾತ್ರೆ ವೈಭವಯುತ ಅಂತ್ಯ
Dhyamava fair concludes with the immersion of the goddess
ಮುಂಡಗೋಡ 12: ಪಟ್ಟಣದ ಹಳೂರ ಶ್ರೀ ಮಾರಿಕಾಂಬಾ (ದ್ಯಾಮವ್ವಾ) ದೇವಿಯ ಜಾತ್ರೆ ಬುಧವಾರ ದೇವಿ ವಿಸರ್ಜನೆಯೊಂದಿಗೆ ಭಕ್ತಿಭಾವಪೂರ್ಣವಾಗಿ ಸಮಾರೋಪಗೊಂಡಿತು. ಕಳೆದ ಎಂಟು ದಿನಗಳಿಂದ ಚೌತಮನೆಯಲ್ಲಿ ಪ್ರತಿಷ್ಠಾಪನೆಯಾಗಿದ್ದ ದೇವಿಯ ದರ್ಶನಕ್ಕೆ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ವಿಶೇಷ ಪೂಜೆ,ಪುನಸ್ಕಾರಗಳಲ್ಲಿ ಪಾಲ್ಗೊಂಡರು. ಜಾತ್ರಾ ಅವಧಿಯಲ್ಲಿ ಪ್ರತಿದಿನವೂ ಹೋಮ, ಹವನ, ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆಯಂತಹ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಸಂಜೆ ವೇಳೆಗೆ ಭಜನೆ, ಆರತಿ ಮತ್ತು ಮಂಗಳ ವಾದ್ಯಗಳ ನಡುವೆ ದೇವಿಗೆ ಪೂರ್ಣಾಹುತಿ ಸಲ್ಲಿಸಿ, ಸಂಪ್ರದಾಯಬದ್ಧ ವಿಧಿವಿಧಾನಗಳೊಂದಿಗೆ ವಿಸರ್ಜನೆ ನೆರವೇರಿಸಲಾಯಿತು. ಈ ಸಂದರ್ಭ ಭಕ್ತರು ಭಾವುಕರಾಗಿ ದೇವಿಗೆ ವಿದಾಯ ಹೇಳಿದರು. ಮಾ.19ರಂದು ಯುಗಾದಿ ದಿನ ಮರು ಪ್ರತಿಷ್ಠಾಪನೆ: ಯುಗಾದಿ ಹಬ್ಬದ ಅಂಗವಾಗಿ ಮಾರ್ಚ್ 19ರಂದು ಗುರುವಾರ ದೇವಸ್ಥಾನದಲ್ಲಿ ಹೋಮ,ಹವನಾದಿಗಳೊಂದಿಗೆ ಶ್ರೀ ಮಾರಿಕಾಂಬಾ (ದ್ಯಾಮವ್ವಾ) ದೇವಿಯ ಮರು ಪ್ರತಿಷ್ಠಾಪನೆ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ದೇವಿಯ ಆಶೀರ್ವಾದ ಪಡೆಯುವಂತೆ ದೇವಸ್ಥಾನ ಸಮಿತಿ ಮನವಿ ಮಾಡಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 