ದೇವಿ ವಿಸರ್ಜನೆಯೊಂದಿಗೆ ದ್ಯಾಮವ್ವಾ ಜಾತ್ರೆ ವೈಭವಯುತ ಅಂತ್ಯ
Dhyamava fair concludes with the immersion of the goddess
ಮುಂಡಗೋಡ 12: ಪಟ್ಟಣದ ಹಳೂರ ಶ್ರೀ ಮಾರಿಕಾಂಬಾ (ದ್ಯಾಮವ್ವಾ) ದೇವಿಯ ಜಾತ್ರೆ ಬುಧವಾರ ದೇವಿ ವಿಸರ್ಜನೆಯೊಂದಿಗೆ ಭಕ್ತಿಭಾವಪೂರ್ಣವಾಗಿ ಸಮಾರೋಪಗೊಂಡಿತು. ಕಳೆದ ಎಂಟು ದಿನಗಳಿಂದ ಚೌತಮನೆಯಲ್ಲಿ ಪ್ರತಿಷ್ಠಾಪನೆಯಾಗಿದ್ದ ದೇವಿಯ ದರ್ಶನಕ್ಕೆ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ವಿಶೇಷ ಪೂಜೆ,ಪುನಸ್ಕಾರಗಳಲ್ಲಿ ಪಾಲ್ಗೊಂಡರು. ಜಾತ್ರಾ ಅವಧಿಯಲ್ಲಿ ಪ್ರತಿದಿನವೂ ಹೋಮ, ಹವನ, ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆಯಂತಹ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಸಂಜೆ ವೇಳೆಗೆ ಭಜನೆ, ಆರತಿ ಮತ್ತು ಮಂಗಳ ವಾದ್ಯಗಳ ನಡುವೆ ದೇವಿಗೆ ಪೂರ್ಣಾಹುತಿ ಸಲ್ಲಿಸಿ, ಸಂಪ್ರದಾಯಬದ್ಧ ವಿಧಿವಿಧಾನಗಳೊಂದಿಗೆ ವಿಸರ್ಜನೆ ನೆರವೇರಿಸಲಾಯಿತು. ಈ ಸಂದರ್ಭ ಭಕ್ತರು ಭಾವುಕರಾಗಿ ದೇವಿಗೆ ವಿದಾಯ ಹೇಳಿದರು. ಮಾ.19ರಂದು ಯುಗಾದಿ ದಿನ ಮರು ಪ್ರತಿಷ್ಠಾಪನೆ: ಯುಗಾದಿ ಹಬ್ಬದ ಅಂಗವಾಗಿ ಮಾರ್ಚ್ 19ರಂದು ಗುರುವಾರ ದೇವಸ್ಥಾನದಲ್ಲಿ ಹೋಮ,ಹವನಾದಿಗಳೊಂದಿಗೆ ಶ್ರೀ ಮಾರಿಕಾಂಬಾ (ದ್ಯಾಮವ್ವಾ) ದೇವಿಯ ಮರು ಪ್ರತಿಷ್ಠಾಪನೆ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ದೇವಿಯ ಆಶೀರ್ವಾದ ಪಡೆಯುವಂತೆ ದೇವಸ್ಥಾನ ಸಮಿತಿ ಮನವಿ ಮಾಡಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 