ಭೂ ದಾಖಲೆಗಳ ಡಿಜಿಟಲೀಕರಣ, ಭೂ ಸುರಕ್ಷಾ ಇ-ಖಜಾನೆ ಉದ್ಘಾಟನೆ
Digitization of Land Records, Inauguration of Bhu Suraksha e-Treasury
ಭೂ ದಾಖಲೆಗಳ ಡಿಜಿಟಲೀಕರಣ, ಭೂ ಸುರಕ್ಷಾ ಇ-ಖಜಾನೆ ಉದ್ಘಾಟನೆ
ಮುದ್ದೇಬಿಹಾಳ 12: ಪಟ್ಟಣದ ಹುಡ್ಕೋ ಬಡಾವಣೆಯಲ್ಲಿರುವ ಮಿನಿ ವಿಧಾನ ಸೌಧದಲ್ಲಿ ತಾಲೂಕಾ ತಹಶಿಲ್ದಾರ ಕಚೇರಿಯಲ್ಲಿ ಸರ್ವೆ ಮತ್ತು ನೋಂದಣಿ ಇಲಾಖೆಗಳ ಎಲ್ಲಾ ಭೂ ದಾಖಲೆಗಳ ಡಿಜಿಟಲೀಕರಣ, ಭೂ ಸುರಕ್ಷಾ ಇ-ಖಜಾನೆಯನ್ನು ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಭೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ ಎಸ್ ನಾಡಗೌಡ(ಅಪ್ಪಾಜಿ) ಶನಿವಾರ ಸಂಜೆ ಉದ್ಘಾಟಿಸಿದರು.
ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಭೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ ಎಸ್ ನಾಡಗೌಡ(ಅಪ್ಪಾಜಿ) ಅವರು ಸುದ್ದಿಗಾರರೊಂದಿಗೆ ಮಾತನಾಡಿ ಭೂ ಸುರಕ್ಷಾ ಇ-ಖಜಾನೆ ತಾಲೂಕು ಕಚೇರಿ, ಸರ್ವೆ ಮತ್ತು ನೋಂದಣಿ ಇಲಾಖೆಗಳ ಎಲ್ಲ ಭೂ ದಾಖಲೆಗಳ ಡಿಜಟಲೀಕರಣ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಈ ಕಾರ್ಯಕ್ರಮ ಆರಂಭಿಸಿದೆ. ಹಳೆಯ, ದುಸ್ಥಿತಿಯಲ್ಲಿರುವ ಭೂ ದಾಖಲೆಗಳನ್ನು ಶಾಶ್ವತ ಡಿಜಿ ದಾಖಲೆಗಳಾಗಿ ಪರಿವರ್ತಿಸುವುದು, ರೆಕಾರ್ಡ್ ರೂಂಗಳಿಂದ ದಾಖಲೆ ಪಡೆದುಕೊಳ್ಳಲು ಇರುವ ತೊಂದರೆಗಳ ನಿವಾರಣೆ, ಹಳೆಯ ದಾಖಲೆಗಳ ಸಂರಕ್ಷಣೆ ಹಾಗೂ ಕಳವು- ತಿದ್ದುಪಡಿ ನಿಯಂತ್ರಣ ಮಾಡುವುದು ಸೇರಿದಂತೆ ಹಲವು ಪ್ರಯೋಜನಗಳನ್ನು ಇನ್ನು ಮುಂದೆ ಸಾರ್ವಜನಿಕರು ಪಡೆಯಬಹುದು. ಸಧ್ಯ ನಮ್ಮ ಸರಕಾರ ಈ ಯೋಜನೆ ಕೈಗೊಂಡಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಕಾರಣ ಇದರಿಂದ ಸಾವರ್ವಜನಿಕರಿಗೆ ತುಂಬಾ ಅನುಕೂಲವಾಗುತ್ತದೆ ಮಾತ್ರವಲ್ಲದೇ ಹೊಸದಾಗಿ ತಂತ್ರಜ್ಞಾನ ರೂಪಿಸಿರುವುದು ಒಳ್ಳೆಯ ಸಮಾಜಮುಖಿ ಕಾರ್ಯ ಇದಾಗಿದೆ ಎಂದರು.
ತಹಶಿಲ್ದಾರ ಬಲರಾಮ ಕಟ್ಟಿಮನಿ, ಪುರಸಭೆ ಅಧ್ಯಕ್ಷ ಮೈಬೂಬ ಗೊಳಸಂಗಿ, ಮುಖಂಡರಾದ ಸಿ ಬಿ ಅಸ್ಕಿ, ವಾಯ್ ಎಚ್ ವಿಜಯಕರ, ಪುರಸಭಭೆ ಸ್ಥಾಯಿ ಸಮೀತಿ ಅಧ್ಯಕ್ಷ ಯಲ್ಲಪ್ಪ ನಾಯಕ ಮಕ್ಕಳ ಶಿರಸ್ಥೆದಾರ ಎಎಂ ಬಾಗೇವಾಡಿ, ಎಂ ಎಚ್ ಮಾಗಿ, ಮಹೇಶ ಪಾಟೀಲ, ಎಸ್ ಎಂ ಸಜ್ಜನ, ಗ್ರಾಮ ಲೆಕ್ಕಾಧಿಕಾರಿ ಹಷೀತ ಎಚ್, ಸೇರಿದಂತೆ ಹಲವರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 