ರೇಲ್ವೆ ಮಾರ್ಗ ರಚನೆಯ ಕುರಿತು ಮಾಜಿ ಸಂಸದರೊಂದಿಗೆ ಚರ್ಚೆ
Discussion with ex-MP on railway construction
ರೇಲ್ವೆ ಮಾರ್ಗ ರಚನೆಯ ಕುರಿತು ಮಾಜಿ ಸಂಸದರೊಂದಿಗೆ ಚರ್ಚೆ
ಗಂಗಾವತಿ 13: ದರೋಜಿ-ಗಂಗಾವತಿ ಮತ್ತು ಗಂಗಾವತಿ-ಬಾಗಲಕೋಟ್ ಬ್ರಾಡಗೇಜ್ ರೇಲ್ವೆ ಮಾರ್ಗ ರಚನೆಯ ಕುರಿತು ಮಾಜಿ ಸಂಸದ ಕರಡಿ ಸಂಗಣ್ಣ ಅವರೊಡನೆ ಸೋಮವಾರ ಚರ್ಚಿಸಲಾಯಿತು.
ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಅವರ ಮನೆಗೆ ಸಂಗಣ್ಣನವರು ಭೇಟಿಯಾದಾಗ ಈ ವಿಷಯವಾಗಿ ಮಾತನಾಡಿದರು.ಹೇಗಾದರೂ ಮಾಡಿ ಮುಂಬರುವ ಬಜೆಟ್ ನಲ್ಲಿ ಅನುದಾನ ಒದಗಿಸಲು ರೇಲ್ವೆ ಸಚಿವರನ್ನು ಭೇಟಿಯಾಗಲು ಈ ಸಂದರ್ಭದಲ್ಲಿ ತೀರ್ಮಾನಿಸಲಾಯಿತು.ಉದ್ದೇಶಿತ ಅನುದಾನಕ್ಕೆ ರಾಜ್ಯದ ಪಾಲನ್ನು ಪಡೆಯಲು ಸಚಿವ ಶಿವರಾಜ ತಂಗಡಗಿಯವರನ್ನು ಭೇಟಿಯಾಗಿ ಅನುದಾನ ಪಡೆಯುವ ಬಗ್ಗೆ ಮನವಿ ಸಲ್ಲಿಸಲು ನಿರ್ಧರಿಸಲಾಯಿತು.
ತುಂಗಭದ್ರಾ ಕಾಡಾ ಮಾಜಿ ಅಧ್ಯಕ್ಷ ಅಶೋಕಸ್ವಾಮಿ ಹೇರೂರ, ನಗರಸಭಾ ಸದಸ್ಯ ಮನೋಹರಸ್ವಾಮಿ,ಬಿ.ಜೆ.ಪಿ.ಧುರಿಣ ಬಸಣ್ಣ, ವಿಶ್ವನಾಥ,ವೀರಯ್ಯಸ್ವಾಮಿ ಹಾಗೂ ಅಶೋಕಸ್ವಾಮಿ ಹೇರೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.ಸಂಗಣ್ಣ ಕರಡಿಯವರನ್ನು ಚರ್ಚೆಯ ಸಮಯದಲ್ಲಿ ಸನ್ಮಾನಿಸಿ,ಗೌರವಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 