ರೇಲ್ವೆ ಮಾರ್ಗ ರಚನೆಯ ಕುರಿತು ಮಾಜಿ ಸಂಸದರೊಂದಿಗೆ ಚರ್ಚೆ
Discussion with ex-MP on railway construction
ರೇಲ್ವೆ ಮಾರ್ಗ ರಚನೆಯ ಕುರಿತು ಮಾಜಿ ಸಂಸದರೊಂದಿಗೆ ಚರ್ಚೆ
ಗಂಗಾವತಿ 13: ದರೋಜಿ-ಗಂಗಾವತಿ ಮತ್ತು ಗಂಗಾವತಿ-ಬಾಗಲಕೋಟ್ ಬ್ರಾಡಗೇಜ್ ರೇಲ್ವೆ ಮಾರ್ಗ ರಚನೆಯ ಕುರಿತು ಮಾಜಿ ಸಂಸದ ಕರಡಿ ಸಂಗಣ್ಣ ಅವರೊಡನೆ ಸೋಮವಾರ ಚರ್ಚಿಸಲಾಯಿತು.
ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಅವರ ಮನೆಗೆ ಸಂಗಣ್ಣನವರು ಭೇಟಿಯಾದಾಗ ಈ ವಿಷಯವಾಗಿ ಮಾತನಾಡಿದರು.ಹೇಗಾದರೂ ಮಾಡಿ ಮುಂಬರುವ ಬಜೆಟ್ ನಲ್ಲಿ ಅನುದಾನ ಒದಗಿಸಲು ರೇಲ್ವೆ ಸಚಿವರನ್ನು ಭೇಟಿಯಾಗಲು ಈ ಸಂದರ್ಭದಲ್ಲಿ ತೀರ್ಮಾನಿಸಲಾಯಿತು.ಉದ್ದೇಶಿತ ಅನುದಾನಕ್ಕೆ ರಾಜ್ಯದ ಪಾಲನ್ನು ಪಡೆಯಲು ಸಚಿವ ಶಿವರಾಜ ತಂಗಡಗಿಯವರನ್ನು ಭೇಟಿಯಾಗಿ ಅನುದಾನ ಪಡೆಯುವ ಬಗ್ಗೆ ಮನವಿ ಸಲ್ಲಿಸಲು ನಿರ್ಧರಿಸಲಾಯಿತು.
ತುಂಗಭದ್ರಾ ಕಾಡಾ ಮಾಜಿ ಅಧ್ಯಕ್ಷ ಅಶೋಕಸ್ವಾಮಿ ಹೇರೂರ, ನಗರಸಭಾ ಸದಸ್ಯ ಮನೋಹರಸ್ವಾಮಿ,ಬಿ.ಜೆ.ಪಿ.ಧುರಿಣ ಬಸಣ್ಣ, ವಿಶ್ವನಾಥ,ವೀರಯ್ಯಸ್ವಾಮಿ ಹಾಗೂ ಅಶೋಕಸ್ವಾಮಿ ಹೇರೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.ಸಂಗಣ್ಣ ಕರಡಿಯವರನ್ನು ಚರ್ಚೆಯ ಸಮಯದಲ್ಲಿ ಸನ್ಮಾನಿಸಿ,ಗೌರವಿಸಲಾಯಿತು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 