ರೇಲ್ವೆ ಮಾರ್ಗ ರಚನೆಯ ಕುರಿತು ಮಾಜಿ ಸಂಸದರೊಂದಿಗೆ ಚರ್ಚೆ
Discussion with ex-MP on railway construction
ರೇಲ್ವೆ ಮಾರ್ಗ ರಚನೆಯ ಕುರಿತು ಮಾಜಿ ಸಂಸದರೊಂದಿಗೆ ಚರ್ಚೆ
ಗಂಗಾವತಿ 13: ದರೋಜಿ-ಗಂಗಾವತಿ ಮತ್ತು ಗಂಗಾವತಿ-ಬಾಗಲಕೋಟ್ ಬ್ರಾಡಗೇಜ್ ರೇಲ್ವೆ ಮಾರ್ಗ ರಚನೆಯ ಕುರಿತು ಮಾಜಿ ಸಂಸದ ಕರಡಿ ಸಂಗಣ್ಣ ಅವರೊಡನೆ ಸೋಮವಾರ ಚರ್ಚಿಸಲಾಯಿತು.
ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಅವರ ಮನೆಗೆ ಸಂಗಣ್ಣನವರು ಭೇಟಿಯಾದಾಗ ಈ ವಿಷಯವಾಗಿ ಮಾತನಾಡಿದರು.ಹೇಗಾದರೂ ಮಾಡಿ ಮುಂಬರುವ ಬಜೆಟ್ ನಲ್ಲಿ ಅನುದಾನ ಒದಗಿಸಲು ರೇಲ್ವೆ ಸಚಿವರನ್ನು ಭೇಟಿಯಾಗಲು ಈ ಸಂದರ್ಭದಲ್ಲಿ ತೀರ್ಮಾನಿಸಲಾಯಿತು.ಉದ್ದೇಶಿತ ಅನುದಾನಕ್ಕೆ ರಾಜ್ಯದ ಪಾಲನ್ನು ಪಡೆಯಲು ಸಚಿವ ಶಿವರಾಜ ತಂಗಡಗಿಯವರನ್ನು ಭೇಟಿಯಾಗಿ ಅನುದಾನ ಪಡೆಯುವ ಬಗ್ಗೆ ಮನವಿ ಸಲ್ಲಿಸಲು ನಿರ್ಧರಿಸಲಾಯಿತು.
ತುಂಗಭದ್ರಾ ಕಾಡಾ ಮಾಜಿ ಅಧ್ಯಕ್ಷ ಅಶೋಕಸ್ವಾಮಿ ಹೇರೂರ, ನಗರಸಭಾ ಸದಸ್ಯ ಮನೋಹರಸ್ವಾಮಿ,ಬಿ.ಜೆ.ಪಿ.ಧುರಿಣ ಬಸಣ್ಣ, ವಿಶ್ವನಾಥ,ವೀರಯ್ಯಸ್ವಾಮಿ ಹಾಗೂ ಅಶೋಕಸ್ವಾಮಿ ಹೇರೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.ಸಂಗಣ್ಣ ಕರಡಿಯವರನ್ನು ಚರ್ಚೆಯ ಸಮಯದಲ್ಲಿ ಸನ್ಮಾನಿಸಿ,ಗೌರವಿಸಲಾಯಿತು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 