ಹನುಮ ವೃತಧಾರಿಗಳಿಗೆ ಕೇಸರಿ ಧ್ವಜ ವಿತರಣೆ
ಲೋಕದರ್ಶನ ವರದಿ
ಹೊಸಪೇಟೆ08: ಹನುವಮಾಲಾ 7ನೇ ವಾಷರ್ಿಕೋತ್ಸವದ ಅಂಗವಾಗಿ ನಗರದ ಹನುಮ ಮಾಲಾಧಾರಿಗಳಿಗೆ ಶನಿವಾರ ಕೇಸರಿ ಧ್ವಜ ವಿತರಿಸಲಾಯಿತು.
ಹನುಮ ಮಾಲಾಧಾರಿಗಳ ಕಾರ್ಯಕ್ರಮದ ತಾಲೂಕು ಅಧ್ಯಕ್ಷ ಗುದ್ಲಿ ಪರಶುರಾಮ, ಭಕ್ತರಿಗೆ ಕೇಸರಿ ಧ್ವಜ ವಿತರಿಸಿ ಮಾತನಾಡಿ, ಡಿ.19ರಂದು ನಗರದಲ್ಲಿ ನಡೆಯಲಿರುವ ಹನುಮ ಮಾಲಾಧಾರಿಗಳ ಬೃಹತ್ ಶೋಭಯಾತ್ರೆ ಅಂಗವಾಗಿ ನಗರದ ಹನುಮ ಭಕ್ತರಿಗೆ ಕೇಸರಿ ಧ್ವಜ ವಿತರಣೆ ಮಾಡಲಾಗಿದೆ.
ಶೋಭಯಾತ್ರೆಯಲ್ಲಿ ತಾಲ್ಲೂಕಿನ ವಿವಿಧ ಭಾಗಗಳ ಹನುಮ ಮಾಲಾಧಾರಿಗಳು ಭಾಗವಹಿಸಲಿದ್ದು, ಇಲ್ಲಿಂದ ಹಂಪಿಯವರಗೆ ಪಾದಯಾತ್ರೆ ನಡೆಯಲಿದೆ.
ವಿರೂಪಾಕ್ಷನ ದರ್ಶನ ಪಡೆದ ಅಲ್ಲಿಂದ ತುಂಗಭದ್ರಾ ನದಿ ದಾಟಿ ಪಕ್ಕದ ಆಂಜನಾದ್ರಿ ಬೆಟ್ಟಕ್ಕೆ ತೆರಳಿ, ಭಕ್ತರು ಆಂಜನೇಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಭಜನಾ ತಂಡ, ಕೋಲಾಟ, ಹಗಲು ವೇಷ, ರಾಮ-ಹನುಮ ವೇಷಧಾರಿಗಳು ಶೋಭಯಾತ್ರೆಯಲ್ಲಿ ಭಾಗವಹಿಸಲಿವೆ ಎಂದರು.
ನಾಗರಾಜ, ಪ್ರವೀಣ್ ಪುರೋಹಿತ್, ಹನುಮಂತ, ಷಣ್ಮುಖ, ಗಣೇಶ, ತಿಪ್ಪೇಶ್ ನಾಯಕ ಸೇರಿದಂತೆ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ನೂರಾರು ಕಾರ್ಯಕರ್ತರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 