ಹನುಮ ವೃತಧಾರಿಗಳಿಗೆ ಕೇಸರಿ ಧ್ವಜ ವಿತರಣೆ
ಲೋಕದರ್ಶನ ವರದಿ
ಹೊಸಪೇಟೆ08: ಹನುವಮಾಲಾ 7ನೇ ವಾಷರ್ಿಕೋತ್ಸವದ ಅಂಗವಾಗಿ ನಗರದ ಹನುಮ ಮಾಲಾಧಾರಿಗಳಿಗೆ ಶನಿವಾರ ಕೇಸರಿ ಧ್ವಜ ವಿತರಿಸಲಾಯಿತು.
ಹನುಮ ಮಾಲಾಧಾರಿಗಳ ಕಾರ್ಯಕ್ರಮದ ತಾಲೂಕು ಅಧ್ಯಕ್ಷ ಗುದ್ಲಿ ಪರಶುರಾಮ, ಭಕ್ತರಿಗೆ ಕೇಸರಿ ಧ್ವಜ ವಿತರಿಸಿ ಮಾತನಾಡಿ, ಡಿ.19ರಂದು ನಗರದಲ್ಲಿ ನಡೆಯಲಿರುವ ಹನುಮ ಮಾಲಾಧಾರಿಗಳ ಬೃಹತ್ ಶೋಭಯಾತ್ರೆ ಅಂಗವಾಗಿ ನಗರದ ಹನುಮ ಭಕ್ತರಿಗೆ ಕೇಸರಿ ಧ್ವಜ ವಿತರಣೆ ಮಾಡಲಾಗಿದೆ.
ಶೋಭಯಾತ್ರೆಯಲ್ಲಿ ತಾಲ್ಲೂಕಿನ ವಿವಿಧ ಭಾಗಗಳ ಹನುಮ ಮಾಲಾಧಾರಿಗಳು ಭಾಗವಹಿಸಲಿದ್ದು, ಇಲ್ಲಿಂದ ಹಂಪಿಯವರಗೆ ಪಾದಯಾತ್ರೆ ನಡೆಯಲಿದೆ.
ವಿರೂಪಾಕ್ಷನ ದರ್ಶನ ಪಡೆದ ಅಲ್ಲಿಂದ ತುಂಗಭದ್ರಾ ನದಿ ದಾಟಿ ಪಕ್ಕದ ಆಂಜನಾದ್ರಿ ಬೆಟ್ಟಕ್ಕೆ ತೆರಳಿ, ಭಕ್ತರು ಆಂಜನೇಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಭಜನಾ ತಂಡ, ಕೋಲಾಟ, ಹಗಲು ವೇಷ, ರಾಮ-ಹನುಮ ವೇಷಧಾರಿಗಳು ಶೋಭಯಾತ್ರೆಯಲ್ಲಿ ಭಾಗವಹಿಸಲಿವೆ ಎಂದರು.
ನಾಗರಾಜ, ಪ್ರವೀಣ್ ಪುರೋಹಿತ್, ಹನುಮಂತ, ಷಣ್ಮುಖ, ಗಣೇಶ, ತಿಪ್ಪೇಶ್ ನಾಯಕ ಸೇರಿದಂತೆ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ನೂರಾರು ಕಾರ್ಯಕರ್ತರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 