ಹನುಮ ವೃತಧಾರಿಗಳಿಗೆ ಕೇಸರಿ ಧ್ವಜ ವಿತರಣೆ
ಲೋಕದರ್ಶನ ವರದಿ
ಹೊಸಪೇಟೆ08: ಹನುವಮಾಲಾ 7ನೇ ವಾಷರ್ಿಕೋತ್ಸವದ ಅಂಗವಾಗಿ ನಗರದ ಹನುಮ ಮಾಲಾಧಾರಿಗಳಿಗೆ ಶನಿವಾರ ಕೇಸರಿ ಧ್ವಜ ವಿತರಿಸಲಾಯಿತು.
ಹನುಮ ಮಾಲಾಧಾರಿಗಳ ಕಾರ್ಯಕ್ರಮದ ತಾಲೂಕು ಅಧ್ಯಕ್ಷ ಗುದ್ಲಿ ಪರಶುರಾಮ, ಭಕ್ತರಿಗೆ ಕೇಸರಿ ಧ್ವಜ ವಿತರಿಸಿ ಮಾತನಾಡಿ, ಡಿ.19ರಂದು ನಗರದಲ್ಲಿ ನಡೆಯಲಿರುವ ಹನುಮ ಮಾಲಾಧಾರಿಗಳ ಬೃಹತ್ ಶೋಭಯಾತ್ರೆ ಅಂಗವಾಗಿ ನಗರದ ಹನುಮ ಭಕ್ತರಿಗೆ ಕೇಸರಿ ಧ್ವಜ ವಿತರಣೆ ಮಾಡಲಾಗಿದೆ.
ಶೋಭಯಾತ್ರೆಯಲ್ಲಿ ತಾಲ್ಲೂಕಿನ ವಿವಿಧ ಭಾಗಗಳ ಹನುಮ ಮಾಲಾಧಾರಿಗಳು ಭಾಗವಹಿಸಲಿದ್ದು, ಇಲ್ಲಿಂದ ಹಂಪಿಯವರಗೆ ಪಾದಯಾತ್ರೆ ನಡೆಯಲಿದೆ.
ವಿರೂಪಾಕ್ಷನ ದರ್ಶನ ಪಡೆದ ಅಲ್ಲಿಂದ ತುಂಗಭದ್ರಾ ನದಿ ದಾಟಿ ಪಕ್ಕದ ಆಂಜನಾದ್ರಿ ಬೆಟ್ಟಕ್ಕೆ ತೆರಳಿ, ಭಕ್ತರು ಆಂಜನೇಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಭಜನಾ ತಂಡ, ಕೋಲಾಟ, ಹಗಲು ವೇಷ, ರಾಮ-ಹನುಮ ವೇಷಧಾರಿಗಳು ಶೋಭಯಾತ್ರೆಯಲ್ಲಿ ಭಾಗವಹಿಸಲಿವೆ ಎಂದರು.
ನಾಗರಾಜ, ಪ್ರವೀಣ್ ಪುರೋಹಿತ್, ಹನುಮಂತ, ಷಣ್ಮುಖ, ಗಣೇಶ, ತಿಪ್ಪೇಶ್ ನಾಯಕ ಸೇರಿದಂತೆ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ನೂರಾರು ಕಾರ್ಯಕರ್ತರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 