ಸೋಮೊಟೋ ಪ್ರಕರಣ ದಾಖಲಿಸಿ ಜಿಲ್ಲಾ ಬಿಜೆಪಿ ನಾಯಕರ ಒತ್ತಾಯ
District BJP leaders insist on filing a case against Somoto
ಕೊಪ್ಪಳ 08: ಕೇಂದ್ರ ಸಚಿವರಾದ ವಿ.ಸೋಮಣ್ಣ ನವರ ಮೇಲೆ ಹಲ್ಲೆಗೆ ಮುಂದಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ನಿಯೋಗವು ಬುಧವಾರ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಎಸ್ಪಿ ಡಾ.ರಾಮ್.ಎಲ್.ಅರಸಿದ್ದಿ ಅವರನ್ನು ಭೇಟಿಯಾಗಿ ಒತ್ತಾಯಿಸಿತು.ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಬಸವರಾಜ ಕ್ಯಾವಟರ್ ಅವರು ಮಾತನಾಡಿ, ಕೊಪ್ಪಳ ತಾಲೂಕಿನ ಹಿಟ್ನಾಳ್ ಗ್ರಾಮದಲ್ಲಿ ರೈಲ್ವೆ ಸೇತುವೆ ಕಾಮಗಾರಿ ಭೂಮಿಪೂಜೆಗೆ ಕೇಂದ್ರ ರೈಲ್ವೆ ರಾಜ್ಯ ಖಾತೆಯ ಸಚಿವರಾದ ವಿ.ಸೋಮಣ್ಣ ಅವರು ಎರಡು ದಿನಗಳ ಹಿಂದೆ ಬಂದಾಗ ಅನಗತ್ಯವಾಗಿ ವಿವಾದ ಮಾಡಲಾಗಿದೆ.ಶಿಷ್ಟಾಚಾರ ಉಲ್ಲಂಘನೆಯಾಗದಿದ್ದರೂ ಕೇಂದ್ರ ಸಚಿವರಿಗೆ ಅವಮಾನ ಮಾಡಬೇಕೆಂಬ ಉದ್ದೇಶದಿಂದ ಅವರ ಮೇಲೆ ಹಲ್ಲೆಗೆ ಜಿಲ್ಲೆಯ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಮುಂದಾಗಿದ್ದು ಸರಿಯಲ್ಲ.
ಸಂಸದ- ಶಾಸಕರ ತವರೂರಿನಲ್ಲಿಯೇ ಈ ರೀತಿಯಾಗಿರುವುದು ದುರಂತದ ಸಂಗತಿ ಎಂದರು.ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್ ಮಾತನಾಡಿ, ಈ ಪ್ರಕರಣದಲ್ಲಿ ತ್ವರಿತವಾಗಿ ಸೊಮೋಟೋ ಪ್ರಕರಣ ದಾಖಲು ಮಾಡಿಕೊಂಡು ದೃಷ್ಕೃತ್ಯ ಎಸಗಿದವರ ಮೇಲೆ ಕ್ರಮ ಜರುಗಿಸಬೇಕು.ಕೇಂದ್ರ ಸಚಿವರು, ಜಿಲ್ಲೆಯ ಅಭಿವೃದ್ಧಿ ಸಲುವಾಗಿ ಕಾಮಗಾರಿ ಭೂಮಿ ಪೂಜೆಗೆ ಬಂದಿದ್ದಾಗ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂಉದ್ದೇಶ ಪೂರ್ವಕವಾಗಿ ಹಲ್ಲೆಗೆ ಮುಂದಾಗಿರುವುದು ಸರಿಯಲ್ಲ. ಇಲ್ಲಿಯ ಕಾಂಗ್ರೆಸ್ ನಾಯಕರಿಗೆ ಅಭಿವೃದ್ಧಿ ಬೇಕಾಗಿಲ್ಲ. ಹೀಗಾಗಿ ಇಂತಹ ಕೆಲಸಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಡೇಸ್ಗೂರು ಮಾತನಾಡಿ, ಈ ಘಟನೆಯ ಹಿಂದೆ ಷಡ್ಯಂತ್ರವಿದೆ. ಕೇಂದ್ರ ಸಚಿವರಿಗೆ ಜಿಲ್ಲೆಗೆ ಬಂದಾಗ ರಕ್ಷಣೆ ಸಿಗದಿದ್ದರೇ ಹೇಗೆ..?ಈ ವಿಚಾರದಲ್ಲಿ ಪೊಲೀಸ್ ಇಲಾಖೆ, ಸರಿಯಾದ ನ್ಯಾಯ ಒದಗಿಸಬೇಕು.ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು. ಮುಖಂಡರಾದ ಅಪ್ಪಣ್ಣ ಪದಕಿ, ಎಸ್.ಆರ್.ಭೂಸನೂರಮಠ, ಪೀರಾ ಹುಸೇನ ಹೊಸಳ್ಳಿ, ರಾಘವೇಂದ್ರ ಪಾನಗಂಟಿ,ಈಶಪ್ಪ ಮಾದಿನೂರ, ರಾಜು ಬಾಕಳೆ, ಸುನಿಲ ಹೆಸರೂರ, ಉಮೇಶ,ರಮೇಶ ನಾಡಗೇರಾ,ರಾಜು ವಸ್ತ್ರದ. ಸೇರಿದಂತೆ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 