ಹಂಪಿ ಉತ್ಸವದ ಯಶಸ್ಸಿಗೆ ಅಧಿಕಾರಿಗಳು ಜವಾಬ್ದಾರಿಯಿಂದ ಶ್ರಮಿಸಿ: ಜಿಲ್ಲಾಧಿಕಾರಿಗಳ ಕಡಕ್ ಸೂಚನೆ
District Collector's stern warning to officials to work responsibly for the success of Hampi festiv
ವಿಜಯನಗರ (ಹೊಸಪೇಟೆ) 22: ವಿಶ್ವವಿಖ್ಯಾತ ಹಂಪಿ ಉತ್ಸವವನ್ನು ಅತ್ಯಂತ ವೈಭವದಿಂದ ಮತ್ತು ಯಶಸ್ವಿಯಾಗಿ ಆಯೋಜಿಸಲು ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಗಳನ್ನು ಯಾವುದೇ ಲೋಪದೋಷವಿಲ್ಲದೆ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಹಂಪಿ ಉತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಬಾರಿ ಫೆಬ್ರವರಿ 13 ರಿಂದ 15ರವರೆಗೆ ಮೂರು ದಿನಗಳ ಕಾಲ ಉತ್ಸವ ನಡೆಯಲಿದ್ದು, ಸಿದ್ಧತೆಗಳಿಗಾಗಿ ಈಗಾಗಲೇ 21 ಉಪ ಸಮಿತಿಗಳನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದರು.?ತಾರಾ ಮೆರುಗು ಮತ್ತು ಐದು ವೇದಿಕೆಗಳು:
ಈ ಬಾರಿಯ ಉತ್ಸವದಲ್ಲಿ ಒಟ್ಟು ಐದು ವೇದಿಕೆಗಳನ್ನು ನಿರ್ಮಿಸಲಾಗುತ್ತಿದ್ದು, ಚಂದನವನದ ಖ್ಯಾತ ಕಲಾವಿದರಾದ ಡಾಲಿ ಧನಂಜಯ್, ಧ್ರುವ ಸರ್ಜಾ, ರಚಿತಾ ರಾಮ್, ರುಕ್ಮಿಣಿ ವಸಂತ್, ಉಪೇಂದ್ರ ಹಾಗೂ ಗಾಯಕರಾದ ಸಂಜಿತ್ ಹೆಗ್ಡೆ, ಶ್ರೇಯಾ ಘೋಷಾಲ್ ಸೇರಿದಂತೆ ಹಲವು ಕಲಾವಿದರು ಪಾಲ್ಗೊಳ್ಳಲಿದ್ದಾರೆ. ಇವರೆಲ್ಲರಿಗೂ ಸೂಕ್ತ ವಸತಿ ಮತ್ತು ಶಿಷ್ಟಾಚಾರದಂತೆ ಆತಿಥ್ಯ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.?ಸುಗಮ ಸಂಚಾರಕ್ಕೆ ಆದ್ಯತೆ, ಹೆಚ್ಚುವರಿ ಬಸ್ ಸೌಲಭ್ಯ: ನೆರೆ ಜಿಲ್ಲೆಗಳಿಂದ ಬರುವ ಪ್ರವಾಸಿಗರಿಗಾಗಿ ಕೆಎಸ್ಆರ್ಟಿಸಿ ವತಿಯಿಂದ ಹೆಚ್ಚಿನ ಬಸ್ ವ್ಯವಸ್ಥೆ ಮಾಡಲಾಗುವುದು.
ರಸ್ತೆ ದುರಸ್ತಿ: ಹಂಪಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿನ 'ಬ್ಲಾಕ್ಸ್ಪಾಟ್'ಗಳನ್ನು ಗುರುತಿಸಿ ಕೂಡಲೇ ದುರಸ್ತಿಪಡಿಸಲು ಮತ್ತು ರಸ್ತೆ ಬದಿಯ ಜಂಗಲ್ ತೆರವುಗೊಳಿಸಲು ಸಂಬಂಧಪಟ್ಟ ಇಲಾಖೆಗೆ ನಿರ್ದೇಶನ ನೀಡಿದರು. ಹಿರಿಯ ನಾಗರಿಕರಿಗೆ ಸೌಲಭ್ಯ: ಹಿರಿಯ ನಾಗರಿಕರಿಗಾಗಿ ವಿಶೇಷವಾಗಿ 'ಪಿಕಪ್ ಮತ್ತು ಡ್ರಾಪ್' ವ್ಯವಸ್ಥೆಯನ್ನು ಪ್ರಾದೇಶಿಕ ಸಾರಿಗೆ ಇಲಾಖೆ ವ್ಯವಸ್ಥೆ ಕಲ್ಪಿಸಬೇಕು.
ಮೂಲಭೂತ ಸೌಕರ್ಯ ಮತ್ತು ಸುರಕ್ಷತೆ, ಜಿಲ್ಲಾ ಪಂಚಾಯತ್ ವತಿಯಿಂದ ಸ್ವಚ್ಛತೆ, ಕುಡಿಯುವ ನೀರು ಮತ್ತು ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡುವಂತೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ತಿಮ್ಮಪ್ಪ ಅವರಿಗೆ ಸೂಚಿಸಲಾಯಿತು. ಜನರ ಆರೋಗ್ಯ ರಕ್ಷಣೆಗಾಗಿ ಉತ್ಸವದ ಸ್ಥಳದಲ್ಲಿ 8 ವೈದ್ಯಕೀಯ ಸ್ಟಾಲ್ಗಳು ಹಾಗೂ 108 ಅಂಬುಲೆನ್ಸ್ ಸದಾ ಸಿದ್ಧವಿರಲಿವೆ.
ಕೃತಕ ಜೂ ಮತ್ತು ಸ್ತಬ್ದಚಿತ್ರ: ಅರಣ್ಯ ಇಲಾಖೆ ವತಿಯಿಂದ ಕೃತಕ ಮೃಗಾಲಯ ಹಾಗೂ ವಿಜಯನಗರದ ಗತ ವೈಭವ ಸಾರುವ ಸ್ತಬ್ದಚಿತ್ರಗಳು ಜನರ ಕಣ್ಮನ ಸೆಳೆಯಲಿವೆ. ಕ್ರೀಡೆ ಮತ್ತು ಸಾಹಿತ್ಯ: ಸಾಹಸ ಕ್ರೀಡೆ, ಗಾಳಿಪಟ ಉತ್ಸವ, ಶಿಲ್ಪಕಲೆ, ರಂಗೋಲಿ ಸ್ಪರ್ಧೆ ಹಾಗೂ ಕವಿಗೋಷ್ಠಿ, ವಿಚಾರಗೋಷ್ಠಿಗಳ ಮೂಲಕ ಸಾಂಸ್ಕೃತಿಕ ಹಬ್ಬವನ್ನು ಆಯೋಜಿಸಲಾಗುವುದು.
ಪೊಲೀಸ್ ಇಲಾಖೆಯ ವತಿಯಿಂದ ಬಿಗಿ ಬಂದೋಬಸ್ತ್ ಏರಿ್ಡಸಲಾಗುವುದು ಎಂದು ತಿಳಿಸಿದ ಜಿಲ್ಲಾಧಿಕಾರಿಗಳು, ಅಧಿಕಾರಿಗಳು ಯಾವುದೇ ಗೊಂದಲಗಳಿದ್ದಲ್ಲಿ ನೇರವಾಗಿ ಜಿಲ್ಲಾಧಿಕಾರಿ ಅಥವಾ ಸಿಇಓ ಅವರನ್ನು ಸಂಪರ್ಕಿಸಿ ಪರಿಹಾರ ಕಂಡುಕೊಳ್ಳುವಂತೆ ಸಲಹೆ ನೀಡಿದರು.?ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ನೋಂಗ್ಜಾಯ್ ಮಹಮದ್ ಅಲಿ ಅಕ್ರಂ ಷಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 