ಕಲ್ಯಾಣ ಕರ್ನಾಟಕ ಉತ್ಸವ ಅಚ್ಚುಕಟ್ಟಾಗಿ ಆಚರಿಸಲು ಜಿಲ್ಲಾಧಿಕಾರಿ ಸೂಚನೆ
District Collector instructs to celebrate Kalyana Karnataka Utsav in a proper manner
ಕಲ್ಯಾಣ ಕರ್ನಾಟಕ ಉತ್ಸವ ಅಚ್ಚುಕಟ್ಟಾಗಿ ಆಚರಿಸಲು ಜಿಲ್ಲಾಧಿಕಾರಿ ಸೂಚನೆ
ಕೊಪ್ಪಳ 04 : ಪ್ರತಿ ವರ್ಷದಂತೆ ಈ ವರ್ಷವು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ಆಚರಣೆ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.ಅವರು ಗುರುವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.ಸೆಪ್ಟೆಂಬರ್ 17 ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಧ್ವಜಾರೋಹಣವಾದ ನಂತರ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರ ಧ್ವಜಾರೋಹಣ ನೆರವೇರಲಿದ್ದು, ಈ ಕಾರ್ಯಕ್ರಮಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಎಲ್ಲಾ ಅಧಿಕಾರಿಗಳು ಭಾಗವಹಿಸಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವ ಮಕ್ಕಳಿಗೆ ಬೆಳಗಿನ ಉಪಹಾರದ ವ್ಯವಸ್ಥೆಯನ್ನು ಮಾಡಬೇಕೆಂದು ಹೇಳಿದರು.ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಗಾಗಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ತಮಗೆ ನೀಡಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಹೇಳಿದರು.ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಆರ್.ಹೇಮಂತಕುಮಾರ್, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಕೃಷ್ಣಮೂರ್ತಿ ದೇಸಾಯಿ, ಕೃಷಿ ಇಲಾಖೆಯ ಜಂಟಿ ನಿರ್ದೆಶಕ ರುದ್ರೇಶಪ್ಪ ಟಿ.ಎಸ್., ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಸೋಮಶೇಖರಗೌಡ ಪಾಟಿಲ್, ಕೊಪ್ಪಳ ತಹಶಿಲ್ದಾರ ವೀಠ್ಠಲ್ ಚೌಗಲಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವೀಠ್ಠಲ್ ಜಾಬಗೌಡರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕ ಕರ್ಣಕುಮಾರ, ಕೊಪ್ಪಳ ನಗರಸಭೆ ಪೌರಾಯುಕ್ತರಾದ ವೇಂಕಟೇಶ ನಾಗನೂರು ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 