ಅಕ್ರಮ ಮರಳು ದಂದೆ: ಜಿಲ್ಲಾಧಿಕಾರಿ ದಿಢೀರ್ ಭೇಟಿ
ರಾಣೇಬೆನ್ನೂರ 11- ತಾಲೂಕಿನ ಐರಣಿ ಗ್ರಾಮದ ಬಳಿ ತುಂಗಭದ್ರಾ ನದಿ ತಟದಲ್ಲಿ ಮರಳು ಸಂಗ್ರಹಿಸುವ ಕೇಂದ್ರವೊಂದಕ್ಕೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು ಸಕರ್ಾರದ ನಿಯಮ ಮೀರಿ ನದಿಯಿಂದ ಮರಳು ಹೊರ ತೆಗೆಯುವ ಕಾರ್ಯ ನಡೆಯುತ್ತಿದೆ ಎಂಬ ಸಾರ್ವಜನಿಕ ದೂರುಗಳ ಹಿನ್ನಲೆಯಲ್ಲಿ ಮರಳು ತುಂಬುವ ಕೇಂದ್ರಗಳಿಗೆ ಭೇಟಿ ನೀಡಲಾಗಿದೆ, ಯಂತ್ರಗಳನ್ನು ಬಳಸಿ ನದಿಯಿಂದ ಮರಳನ್ನು ಹೊರ ತೆಗೆಯಬಾರದು, ಈ ನಿಯಮವನ್ನು ಉಲ್ಲಂಘಿಸುವಂತಿಲ್ಲ. ಪ್ರಕೃತಿಯ ಸಂಪತ್ತು ರಕ್ಷಿಸಿಸುವುದು ಎಲ್ಲರ ಹೊಣೆಯಾಗಿದೆ ಎಂದರು.
ಮರಳು ಸಂಗ್ರಹಿಸುವ 3ನೇ ಕೇಂದ್ರದಲ್ಲಿ ಇದ್ದಂತಹ 2 ಜೆಸಿಬಿ, 1 ಇಟಾಚಿ, 1 ಟ್ರ್ಯಾಕ್ಟರ್, ಮೂರು ಸ್ಯಾಂಡ್ ಪಿಲ್ಟರ್ ಮಾಡುವ ಆಯಿಲ್ ಮೆಷಿನ್ಗಳನ್ನು ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಪೊಲೀಸರು ವಶಕ್ಕೆ ಪಡೆದರು. ತಹಶೀಲ್ದಾರ್ ಸಿ.ಎಸ್.ಕುಲಕಣರ್ಿ, ಸಿಪಿಐ ಸುರೇಶ್ ಸಗರಿ, ಕಂದಾಯ ನಿರೀಕ್ಷಕ ಎಚ್.ಕೆ.ಚಲವಾದಿ, ಗ್ರಾಮ ಲೆಕ್ಕಾಧಿಕಾರಿ ಯುವರಾಜ್ ನಾಯ್ಕ, ಪ್ರಕಾಶ್ ಮತ್ತಿತರರು ಸೇರಿದಂತೆ ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 