ಅಕ್ರಮ ಮರಳು ದಂದೆ: ಜಿಲ್ಲಾಧಿಕಾರಿ ದಿಢೀರ್ ಭೇಟಿ
ರಾಣೇಬೆನ್ನೂರ 11- ತಾಲೂಕಿನ ಐರಣಿ ಗ್ರಾಮದ ಬಳಿ ತುಂಗಭದ್ರಾ ನದಿ ತಟದಲ್ಲಿ ಮರಳು ಸಂಗ್ರಹಿಸುವ ಕೇಂದ್ರವೊಂದಕ್ಕೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು ಸಕರ್ಾರದ ನಿಯಮ ಮೀರಿ ನದಿಯಿಂದ ಮರಳು ಹೊರ ತೆಗೆಯುವ ಕಾರ್ಯ ನಡೆಯುತ್ತಿದೆ ಎಂಬ ಸಾರ್ವಜನಿಕ ದೂರುಗಳ ಹಿನ್ನಲೆಯಲ್ಲಿ ಮರಳು ತುಂಬುವ ಕೇಂದ್ರಗಳಿಗೆ ಭೇಟಿ ನೀಡಲಾಗಿದೆ, ಯಂತ್ರಗಳನ್ನು ಬಳಸಿ ನದಿಯಿಂದ ಮರಳನ್ನು ಹೊರ ತೆಗೆಯಬಾರದು, ಈ ನಿಯಮವನ್ನು ಉಲ್ಲಂಘಿಸುವಂತಿಲ್ಲ. ಪ್ರಕೃತಿಯ ಸಂಪತ್ತು ರಕ್ಷಿಸಿಸುವುದು ಎಲ್ಲರ ಹೊಣೆಯಾಗಿದೆ ಎಂದರು.
ಮರಳು ಸಂಗ್ರಹಿಸುವ 3ನೇ ಕೇಂದ್ರದಲ್ಲಿ ಇದ್ದಂತಹ 2 ಜೆಸಿಬಿ, 1 ಇಟಾಚಿ, 1 ಟ್ರ್ಯಾಕ್ಟರ್, ಮೂರು ಸ್ಯಾಂಡ್ ಪಿಲ್ಟರ್ ಮಾಡುವ ಆಯಿಲ್ ಮೆಷಿನ್ಗಳನ್ನು ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಪೊಲೀಸರು ವಶಕ್ಕೆ ಪಡೆದರು. ತಹಶೀಲ್ದಾರ್ ಸಿ.ಎಸ್.ಕುಲಕಣರ್ಿ, ಸಿಪಿಐ ಸುರೇಶ್ ಸಗರಿ, ಕಂದಾಯ ನಿರೀಕ್ಷಕ ಎಚ್.ಕೆ.ಚಲವಾದಿ, ಗ್ರಾಮ ಲೆಕ್ಕಾಧಿಕಾರಿ ಯುವರಾಜ್ ನಾಯ್ಕ, ಪ್ರಕಾಶ್ ಮತ್ತಿತರರು ಸೇರಿದಂತೆ ಪಾಲ್ಗೊಂಡಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 