ಸೋಮಲಾಪುರಕ್ಕೆ ಒಲಿದು ಬಂದ ಜಿಲ್ಲಾ ಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ
District level best cooperative society award goes to Somalapura
ಕಂಪ್ಲಿ 18 : ಕಂಪ್ಲಿ ಕ್ಷೇತ್ರದ ಸೋಮಲಾಪುರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಜಿಲ್ಲಾ ಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಯನ್ನು ಸೋಮವಾರ ನೀಡಿ ಗೌರವಿಸಿದರು. ಬಳ್ಳಾರಿ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತವು ಹೊಸಪೇಟೆಯಲ್ಲಿ ಏರಿ್ಡಸಿದ್ದ ರಾಜ್ಯ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಸೋಮಲಾಪುರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಬಳ್ಳಾರಿ ಜಿಲ್ಲಾ ಸಹಕಾರ ಚಳುವಳಿಯ ಬೆಳವಣಿಗೆಯಲ್ಲಿ ಸಂಘವು ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಹೊಸಪೇಟೆಯ ಸುರಭಿ ಕಲ್ಯಾಣ ಮಂಟಪದಲ್ಲಿ ಕ ನಡೆದ ಸಮಾರಂಭದಲ್ಲಿ ಸೋಮಲಾಪುರ ಸಹಕಾರ ಸಂಘದ ಅಧ್ಯಕ್ಷರಾದ ಬಿ.ಶಿವರಾಜ ಹಾಗೂ ಮುಖ್ಯ ಕಾರ್ಯನಿರ್ವಾಹಕರಾದ ಗೌಡ್ರು ಡಿಂಡಿ ಮಹರ್ಷಿ ಇವರುಗಳಿಗೆ ಗಣ್ಯರು ಉತ್ತಮ ಸಹಕಾರ ಸಂಘದ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಗುಂಡುಮುಣುಗು ತಿಪ್ಪೇಸ್ವಾಮಿ, ಉಪಾಧ್ಯಕ್ಷರಾದ ದ್ವಾರುಕೇಶ್, ಬಳ್ಳಾರಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಶೀವಪ್ರಸಾದಸ್ವಾಮಿ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಪಿ.ಮೂಕಯ್ಯಸ್ವಾಮಿ, ಎಲ್.ಎಸ್.ಆನಂದ್, ನಾಯಕ ಹುಲುಗಪ್ಪ, ಬಿಡಿಸಿಸಿ ಬ್ಯಾಂಕ್ ಎಂಡಿ ಜೈಪ್ರಕಾಶ್, ಡಿಆರ್ ವೀರಭದ್ರಯ್ಯಸ್ವಾಮಿ, ಎಆರ್ ಗ್ಯಾನಪ್ಪ, ಬಿ.ಯು.ಅಂಜಿನಪ್ಪ, ಮೆಟ್ರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಧ್ಯಕ್ಷ ಹೊಸಕೋಟೆ ಜಗದೀಶ್, ಸದಸ್ಯರಾದ ನಾಗರಾಜ ಸೇರಿದಂತೆ ವಿವಿಧ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕರು, ಅಧ್ಯಕ್ಷರು, ನಿರ್ದೇಶಕರುಗಳು ಭಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 