ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಹಾಗೂ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ
District level sports meet for officers and employees of the Social Welfare Department
ಗದಗ 11: ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಹಾಗೂ ನೌಕರರ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಹಿತದೃಷ್ಟಿಯಿಂದ ವಿಭಾಗ ಮಟ್ಟದ ಅಧಿಕಾರಿಗಳು ನೌಕರರಿಗೆ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಬುಧವಾರ ರಂದು ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆ ಲಕ್ಕುಂಡಿಯಲ್ಲಿ ನಡೆಯಿತು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ನಂದಾ ಹಣಬರಟ್ಟಿ, ಪೋಲಿಸ್ ಉಪಾಧೀಕ್ಷಕರು ವಿದ್ಯಾನಂದ ನಾಯಕ, ಯೋಜನಾ ನಿರ್ದೇಶಕರು ಜಿಲ್ಲಾ ಪಂಚಾಯತ ಎಮ್.ವಿ ಚಳಗೇರಿ, ಕರ್ರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರು ಬಸವರಾಜ ಬಳ್ಳಾರಿ ರವರು ಜಿಲ್ಲಾ ಮಟ್ಟದ ಕ್ರೀಡಾಕೂಟಗಳ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿದರು.
ಪತ್ರಾಂಕಿತ ವ್ಯವಸ್ಥಾಪಕರಾದ ಮಂಜುಳಾ ಸೋಮಕ್ಕನವರ, ಸಹಾಯಕ ನಿರ್ದೇಶಕರಾದ ಗೋಪಾಲ ಲಮಾಣಿ, ಬಿ. ಎಮ್ ಬಡಿಗೇರ, ಉಧಯಕುಮಾರ ಎಲಿವಾಳ, ಗೀತಾ ಆಲೂರು, ಪ್ರಾಂಶುಪಾಲರಾದ ವೈಶಾಲಿ ಸೊಲ್ಲಾಪೂರ, ಲೆಕ್ಕ ಅಧೀಕ್ಷಕರು ಗೋಪಾಲ ಲಮಾಣಿ , ಮಂಜುಳಾ ಎನ್, ವಿದ್ಯಾವತಿ ಕುರಹಟ್ಟಿ , ಸಮಾಜ ಕಲ್ಯಾಣ ಇಲಾಖೆಯ ಎಲ್ಲ ಸಿಬ್ಬಂದಿಗಳು. ಕ್ರೀಡಾ ಕೂಟಗಳಲ್ಲಿ ಭಾಗವಹಿಸುವಂತಹ ಎಲ್ಲ ಸಿಬ್ಬಂದಿಗಳು, ಕ್ರೈಸ್ ವಸತಿ ಶಾಲೆಗಳ ಎಲ್ಲ ಪ್ರಾಂಶುಪಾಲರು. ದೈಹಿಕ ಶಿಕ್ಷಕರು, ಚಿತ್ರಕಲಾ ಶಿಕ್ಷಕರು, ಸಂಗೀತ ಶಿಕ್ಷಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 